Wednesday 29 May 2013





ಹುಟ್ಟಿದ ಮಗುವಿನಲ್ಲಿ ಸ್ವಾಮಿಗಳು ಹೇಗಿರಬೇಕಪ್ಪಾ ಎನ್ನುವ ಪ್ರಶ್ನೆಯನ್ನು ಕೇಳಿದರೆ ಮಗುವು ಕೂಡ ಚೆನ್ನಾಗಿ ಉತ್ತರಿಸುತ್ತದೆ. ಕಷಾಯವನ್ನು ಧರಿಸಿದ ಅವರು ಸಮಾಜದಲ್ಲಿರುವ ಜನರಿಗೆ ಮಾರ್ಗದರ್ಶಕರಾಗಿರಬೇಕು. ಸತ್ಯಾಂಶ ಸಂಭೂತರಾಗಿರುವ ಅವರು ಕಾಮ-ಕ್ರೋಧ-ಲೋಭ-ಮೋಹ ಮದ-ಮಾತ್ಸರ್ಯವನ್ನು ತ್ಯಜಿಸಬೇಕು ಎನ್ನುವ ಸತ್ಯ ಎಲ್ಲರಿಗೂ ತಿಳಿದಿದೆ. ಇತ್ತೀಚಿಗೆ ಕಾವಿ ವಸ್ತ್ರವನ್ನು ಧರಿಸಿದ ಸ್ವಾಮಿಗಳ ಕಾಮಪುರಾಣ ಪತ್ರಿಕೆಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಎಲ್ಲಾ ಸ್ವಾಮೀಗಳ ಮೇಲಿನ ಗೌರವ ಕಳೆಗುಂದುತ್ತಿರುವ ಕಾಲಘಟ್ಟದಲ್ಲಿ ಕರಾವಳಿಯ ಸ್ವಾಮಿಗಳು ಆಗಬಹುದು ಎನ್ನುವ ಸ್ವಲ್ಪ ಮಟ್ಟಿನ ತಿಳುವಳಿಕೆ ನಮ್ಮದಾಗಿತ್ತು.
ಆದರೆ ಇಂದು ನಡೆದ ಘಟನೆಯಿಂದ ಇಂತಹ ಸ್ವಾಮೀಗಳು ಇದ್ದಾರಾ ಎನ್ನುವ ಸಂಶಯ ಮೂಡುತ್ತದೆ. ಈ ಸ್ವಾಮಿ ಸ್ವಾರ್ಥಿಯಾದರೆ....ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯ ಮೇಲಿಟ್ಟಿದ್ದ ಜನರ ನಂಬಿಕೆಗೆ ತಣ್ಣೀರು ಎರಚಿದರೆ..ಕೇವಲ ಮಠದ ಸುತ್ತಲಿರುವ ಜಾಗವನ್ನು ಅಕ್ರಮವಾಗಿ ಮಠಕ್ಕೆ ಬರೆಸಿಕೊಳ್ಳುವ ಇವರ ಸ್ವಾರ್ಥಕ್ಕೆ ಇಂದು ೬೫ ವರ್ಷದ ಶಾರದಮ್ಮ ಮತ್ತು ಈಶ್ವರ ಚಂದ್ರ ಶಾಸ್ತ್ರಿ ಬಲಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವಾಗ ಇವರು ಸ್ವಾಮಿಯೇ ಅಥವಾ ಗೂಂಡಾಗಿರಿಯನ್ನು ಸಾರುವ ಗೂಂಡಾ ಸ್ವಾಮೀಜಿಯೇ?
ಒಡಿಯೂರು ಸ್ವಾಮಿಗಳು ಈಶ್ವರ ಚಂದ್ರ ಶಾಸ್ತ್ರಿ ಅವರ ಜಾಗದ ಗಲಾಟೆಯನ್ನು ಸರಿಪಡಿಸುವುದರ ಹೊರತಾಗಿ ಅವರಿಗೆ ಬೆದರಿಕೆ ಹಾಕಲು ಮಂಗಳೂರಿನಿಂದ ಅರುಣ್, ಸಂತೂ ಅವರ ನೇತೃತ್ವದ ೧೦ ಜನರ ತಂಡವನ್ನು ಕರೆತಂದು ಹಲ್ಲೆ ನಡೆಸಿದರಲ್ಲ. ಈ ಸಂದರ್ಭದಲ್ಲಿ ೬೫ ವರ್ಷದ ಶಾರದಮ್ಮ ಎನ್ನುವ ವೃದ್ಧೆಯ ಮೇಲೂ ಕೈ ಎಸಗಿ ಆಸ್ಪತ್ರೆ ಸೇರುವಂತೆ ಮಾಡಿದರಲ್ಲ. ವಿಚಾರಿಸಿದ್ದಕ್ಕೆ ತಕರಾರು ಮಾಡಿದರೆ ಜೀವ ತೆಗೆಯುತ್ತೇವೆ ಎನ್ನುವ ಬೆದರಿಕೆಯೂ ಕೂಡ ಹಾಕಿದ್ದಾರೆ. ಹಿಂದೊಮ್ಮೆ ಶ್ರೀನಿವಾಸ ಭಟ್ಟರ ಜಮೀನಿನ ವಿಷಯದಲ್ಲಿಯೂ ಕೂಡ ಗಲಾಟೆ ಸಂಭವಿಸಿದ್ದು, ಪೊಲೀಸ್ ದೂರು ದಾಖಲಿಸಿದ್ದರೂ, ಯಾವುದೇ ಪರಿಹಾರ ದೊರಕಿಲ್ಲ.
ಒಡಿಯೂರು ಭಕ್ತರಿಗೆ ಬೇಸರವಾಗಬಹುದು...ಸ್ವಾಮೀಜಿಗಳು ಹೀಗೆ ಇದ್ದಾರಾ ಎನ್ನುವುದಾಗಿ..ಅದಕ್ಕೆ ಅಲ್ಲವೇ ಕುರುಡು ಕಾಂಚಾಣ ಕುಣಿಯುತ್ತಲಿತ್ತು..ಕಾಲಿಗೆ ಬಿದ್ದೊರ ತುಳಿಯುತ್ತಲಿತ್ತು ಎಂದಿರುವುದು...
ಸ್ವಾಮೀಗಳೇ ನಿಮಗೆ ಗೌರವಕ್ಕೆ ಹಾಗೂ ಕಾವಿ ಬಟ್ಟೆಯನ್ನು ಧರಿಸಿರುವುದಕ್ಕೆ ನೀವು ಮಾಡುವ ಈ ಕಾರ್ಯ ನ್ಯಾಯವೇ...?

Thursday 9 May 2013

ಮತದಾರನೇ ನಿನಗೆ ಹ್ಯಾಟ್ಸ್‌ಅಪ್...
ಕರಾವಳಿಯಲ್ಲಿ ಮುದುಡಿದ ಕಮಲ...ವಿಜೃಂಭಿಸಿದ ಕೈ..ವಿಧಾನ ಸಭೆಯತ್ತ ಶ್ರೀನಿವಾಸಣ್ಣನ ಆಟೋ
ಅಂತೂ ಕರ್ನಾಟಕ ವಿಧಾನ ಸಭಾ ಕ್ಷೇತ್ರದಲ್ಲಿ ಮೇ-೫ ರಂದು ನಡೆದ ಚುನಾವಣೆಯಲ್ಲಿನ ಫಲಿತಾಂಶ ಅಚ್ಚರಿ ಮೂಡಿಸಿರುವುದರಲ್ಲಿ ಸಂಶಯವೇ ಇಲ್ಲಾ. ಮತದಾರರು ತಮಗೆ ಬೇಕಾದ ಅಭ್ಯರ್ಥಿಗಳನ್ನು ಆರಿಸಿದ್ದಾರೋ? ಅಥವಾ ಅಭ್ಯರ್ಥಿಗಳು ಮತದಾರರನ್ನು ಖರೀದಿಸಿದ್ದಾರೋ? ಎನ್ನುವ ಸಂಶಯವಿದ್ದರೂ ಕರಾವಳಿ ಭಾಗದಲ್ಲಿ ಮಾತ್ರ ಈ ಮಾತಿಗೆ ಆಸ್ಪದವೇ ನೀಡಿಲ್ಲದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಡೆದ ಒಟ್ಟು ೧೩ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್೧೦ಸ್ಥಾನಗಳನ್ನು ಪಡೆದು ಜಯಭೇರಿ ಬಾರಿಸಿದೆ. ಬಿಜೆಪಿ ಕೇವಲ ೨ ಸ್ಥಾನಗಳಲ್ಲಿ ತನ್ನ ಪ್ರಭುತ್ವ ಸಾದಿಸಿದ್ದರೆ, ಬಿಜೆಪಿಯಿಂದ ಕಡೆಗಣಿಸಲ್ಪಟ್ಟು, ಸ್ವಾಭಿಮಾನದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ೪೦,೬೧೧ ಮತಗಳ ಅಂತರದಿಂದ ವಿಜಯಿಯಾಗಿ ರಾಜ್ಯ ವಿಧಾನ ಸಭಾ ಚುನಾವಣೆಯ ಇತಿಹಾಸದಲ್ಲಿಯೇ ದಾಖಲೆ ನಿರ್ಮಿಸಿದ್ದಾರೆ.
ಚುನಾವಣೆಯ ಪೂರ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕನಿಷ್ಟ ೫ ಸ್ಥಾನ ಪಡೆಯಬಹುದು ಎನ್ನುವ ನಿರೀಕ್ಷೆ ಸಂಘ-ಪರಿವಾರದ ಬಂಧುಗಳಲ್ಲಿ ಹಾಗೂ ಬಿಜೆಪಿಯ ನಾಯಕರುಗಳಲ್ಲಿತ್ತು. ಆದರೆ ಅವರ ನಿರೀಕ್ಷೆಯನ್ನು ಸತ್ಯ ಮಾಡುವುದಕ್ಕೆ ಹಾಗೂ ಹುಸಿಗೊಳಿಸಲು ಸಾಮಾನ್ಯ ಕಾರ್ಯಕರ್ತನಿಗೂ ಸಾಧ್ಯ ಎನ್ನುವುದನ್ನು ಮತದಾರ ತೋರಿಸಿಕೊಟ್ಟಿದ್ದಾನೆ. ಕೇವಲ ಹೇಳಿಕೆಗೆ ತಲೆಯಾಡಿಸುವ ಕುರಿಯಲ್ಲ ನಾವು. ಸ್ವಂತವಾಗಿ ಆಲೋಚಿಸುವ ಕಿಂಚಿತ್ ಬುದ್ದಿಶಕ್ತಿಯಿದೆ ಎನ್ನುವುದನ್ನು ಮೌನವಾಗಿ ಕೃತಿಯಿಂದ ಮಾಡಿ ತೋರಿಸಿದ ಮತದಾರರ ಸಾಮರ್ಥ್ಯವನ್ನು ಈ ಸಂದರ್ಭ ಶ್ಲಾಘಿಸಲೇಬೇಕು.
ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕೃಷ್ಣ ಜೆ.ಪಾಲೆಮಾರ್, ಮಂಗಳೂರು ದಕ್ಷಿಣದ ಎನ್.ಯೋಗೀಶ್ ಭಟ್, ಬಂಟ್ವಾಳದ ಅಭ್ಯರ್ಥಿ ಉಳೆಪ್ಪಾಡಿ ಗುತ್ತು ರಾಜೇಶ್ ನಾಕ್, ಸುಳ್ಯದಲ್ಲಿ ಅಂಗಾರ, ಪುತ್ತೂರಿನಲ್ಲಿ ಸಂಜೀವ ಮಟಂದೂರು ಈ ಐವರು ಅಭ್ಯರ್ಥಿಗಳು ವಿಜಯಿಗಳಾಗುತ್ತಾರೆ ಎನ್ನುವ ಅತೀವ ನಂಬಿಕೆ ಪಕ್ಷದ ನಾಯಕರಲ್ಲಿತ್ತು. ಹಿರಿಯರ ನಂಬಿಕೆಯನ್ನು ಬೇರು ಸಮೇತ ಕೀಳಬಾರದು ಎನ್ನುವುದಕ್ಕೆ ಸುಳ್ಯದಲ್ಲಿ ಬಿಜೆಪಿಯ ಅಂಗಾರ ಅವರನ್ನು ಕೇವಲ ೨೦೦೦ದೊಳಗಿನ ಮತಗಳ ಅಂತರದಲ್ಲಿ ವಿಜಯಿಯನ್ನಾಗಿ ಮಾಡಿದ್ದಾರೆ. ಬ್ಲೂ ಬಾಯ್ ಎಂದು ಖ್ಯಾತರಾಗಿದ್ದ ಕೃಷ್ಣ ಜೆ.ಪಾಲೆಮಾರ್ ಚುನಾವಣಾ ಪೂರ್ವದಲ್ಲಿ ಕಾರ್ಯಕರ್ತರಿಗೆ ಬೇಕಾದಷ್ಟು ಹಣ ನೀಡಿ, ಹಗಲಿರುಳೆನ್ನದೇ ಕಾರ್ಯಕರ್ತರನ್ನು ಭೇಟಿ ಮಾಡಿರುವುದಕ್ಕೆ ಪ್ರತಿಫಲವಾಗಿ ಅತ್ಯಂತ ಕಡಿಮೆ ಅಂತರದಲ್ಲಿ ಸೋಲನ್ನು ಅನುಭವಿಸಿರುವುದು ಕಾರ್ಯಕರ್ತರೆಲ್ಲರಿಗೂ ಬೇಸರದ ಸಂಗತಿಯಾಗಿದೆ. ಅವರನ್ನು ಒತ್ತಾಯ ಪೂರ್ವಕವಾಗಿ ಚುನಾವಣೆಗೆ ನಿಲ್ಲಿಸಿದ್ದು, ಅವರು ಗೆದ್ದೆ-ಗೆಲ್ಲುತ್ತಾರೆಂಬುದು ಎಲ್ಲಾ ಕಾರ್ಯಕರ್ತರ ದೃಢ-ನಂಬಿಕೆಯಾಗಿತ್ತು. ಆದರೆ ತಾನೊಂದು ಬಗೆದರೆ ದೈವ ಬೇರೊಂದು ಬಗೆಯುತ್ತದೆ ಎನ್ನುವುದಕ್ಕೆ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಭ್ಯರ್ಥಿ ಮೊದಿನ್ ಭಾವ ವಿಜಯಿಯಾಗಿದ್ದಾರೆ. ಪ್ರಾರಂಭದಲ್ಲಿ ಈ ಕ್ಷೇತ್ರದಲ್ಲಿ ಕೃಪಾ ಆಳ್ವರಿಗೆ ಸಂಭವಿತ ಟಿಕೆಟ್ ಘೋಷಣೆಯಾದಾಗ ಪಾಲಿಕೆ ಸದಸ್ಯರು ರಾಜೀನಾಮೆ ಘೋಷಣೆ ಮಾಡಿ ತಮ್ಮ ಅಸಂತೋಷ ವ್ಯಕ್ತಪಡಿಸಿದ್ದರು. ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ಬದಲಾವಣೆಯಾಗಿ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿರುವುದು ಗೆಲುವಿಗೆ ಕಾರಣವಾಗಿದೆ ಎನ್ನುವುದು ನಾಯಕರ ಅಭಿಮತ.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ವಿಧಾನ ಸಭಾ ಉಪಾಧ್ಯಕ್ಷರಾಗಿದ್ದ ಎನ್.ಯೋಗೀಶ್ ಭಟ್ ಗೆಲುತ್ತಾರೆನ್ನುವ ನಿರೀಕ್ಷೆಯಿತ್ತು. ಕಾಂಗ್ರೆಸ್‌ನ ಜೆ.ಆರ್.ಲೋಬೋ ಕಮಿಷನರ್ ಆಗಿದ್ದು, ರಾಜೀನಾಮೆಯ ನಂತರ ಆರು ತಿಂಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಯಾಗಿ ಕೇವಲ ಕಡಿಮೆ ಅಂತರದಲ್ಲಿ ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾದ ಮೊದಲ ಕ್ರಿಶ್ಚಿಯನ್ ವ್ಯಕ್ತಿ. ಜೆ.ಆರ್.ಲೋಬೊ ಜಾತಿವಾದಿಯಾಗಿ ಕಾಣಿಸಿಕೊಂಡು ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ವಿಜಯಿಯಾದಾಗ ಅದರ ಅಲೆಗಳು ಮಂಗಳೂರಿನಲ್ಲಿ ಈಗಾಗಲೇ ಕಾಣಿಸಿಕೊಂಡಿದೆ. ಯೋಗೀಶ್ ಭಟ್ ಶಾಸಕರಾಗಿದ್ದ ಸಂದರ್ಭ ಕೇವಲ ಭರವಸೆಗಳನ್ನು ನೀಡುತ್ತಾ ಪಕ್ಷದ ಕಾರ್ಯಕರ್ತರಿಗೂ ಬೇಸರವನ್ನು ತರಿಸುವಂತ ವ್ಯಕ್ತಿತ್ವವನ್ನು ಹೊಂದಿದ್ದರು. ಮಂಗಳೂರು ಕ್ಷೇತ್ರದಲ್ಲಿ ಯು.ಟಿ.ಖಾದರ್ ದಾಖಲೆಯ ಮೊತ್ತದೊಂದಿಗೆ ವಿಜಯಿಯಾಗಿದ್ದು, ಬಿಜೆಪಿಯ ಚಂದ್ರಹಾಸ ಉಳ್ಳಾಲ್ ಸೋತಿದ್ದಾರೆ. ಬಂಟ್ವಾಳದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ಟರ ಅನುಯಾಯಿಯಾದ ಉಳೆಪ್ಪಾಡಿಗುತ್ತು ರಾಜೇಶ್ ನಾಕ್ ಸಂಘ ಪರಿವಾರದ ಸಜ್ಜನ ವ್ಯಕ್ತಿ. ಸಾವಯವ ಕೃಷಿಕನಾಗಿದ್ದುಕೊಂಡು ಎಲ್ಲಾ ಕೃಷಿಕರಿಗೂ ಮಾರ್ಗದರ್ಶಕರಾಗಿದ್ದರು. ಅಂತಹ ವ್ಯಕ್ತಿಗೆ ರಾಜಕೀಯದ ಹುಚ್ಚು ಹಿಡಿದು, ಬಂಟ್ವಾಳ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಚುನಾವಣೆಗೆ ದುಮುಕಿಯೇ ಬಿಟ್ಟರು. ಬಂಟ್ವಾಳದ ಹಳೆಯ ಹುಲಿ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಬಿ.ರಮಾನಾಥ ರೈ ಚುನಾವಣೆಗೆ ಪೂರ್ವದಲ್ಲಿಯೇ ಭವಿಷ್ಯ ನುಡಿದಿದ್ದರು. ಈ ಚುನಾವಣೆಯು ನನ್ನ ಹಾಗೂ ಕಲ್ಲಡ್ಕ ಪ್ರಭಾಕರ ಭಟ್ಟನ ವಿರುದ್ದದ ಚುನಾವಣೆ. ಇಲ್ಲಿ ನಾನು ಗೆದ್ದೆ ಗೆಲ್ಲುತ್ತೇನೆ ಎನ್ನುವ ಅವರ ಅತೀವ ನಂಬಿಕೆಯನ್ನು ಮತದಾರರು ಹುಸಿಗೊಳಿಸಲಿಲ್ಲ.
ಪುತ್ತೂರಿನಲ್ಲಿಯೂ ಕೂಡ ಇಂತಹುದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೂಲವಿರುವುದೇ ಪುತ್ತೂರಿನಲ್ಲಿ. ಎಲ್ಲಾ ಕ್ಷೇತ್ರದಲ್ಲಿಯೂ ಸೋತರೂ ಪುತ್ತೂರಿನಲ್ಲಿ ವಿಜಯಿಯಾಗುತ್ತದೆ ಎನ್ನುವ ಹುಚ್ಚುನಂಬಿಕೆ. ಕಳೆದ ಬಾರಿ ಶಕುಂತಲಾ ಶೆಟ್ಟಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಅವರು ಬಂಡಾಯವಾಗಿ ಸ್ಪರ್ಧಿಸಿ ಸೋತಿದ್ದರು. ಕಾಂಗ್ರೆಸ್‌ನಿಂದ ದಿ.ಬೊಂಡಾಲ ಜಗನ್ನಾಥ ಶೆಟ್ಟಿ ಅವರ ವಿರುದ್ದ ಮೊದಲ ಬಾರಿಗೆ ಮಲ್ಲಿಕಾ ಪ್ರಸಾದ್ ಶಾಸಕಿಯಾಗಿ ಆಯ್ಕೆಗೊಂಡಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಶಕುಂತಲಾ ಶೆಟ್ಟಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದು, ಬಿಜೆಪಿಯಿಂದ ಸಂಜೀವ ಮಟಂದೂರು ಸ್ಪರ್ಧಿಸಿದ್ದರು. ಶಕ್ಕು ಅಕ್ಕಾ ಎಂದು ಖ್ಯಾತರಾಗಿರುವ ಬಂಟ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಚುನಾವಣೆಗೆ ಪೂರ್ವದಲ್ಲಿ ಉರಿಮಜಲು ರಾಮ ಭಟ್ ಅವರಲ್ಲಿಗೆ ಹೋಗಿ ಅವರಿಗೆ ನಮಸ್ಕರಿಸಿ, ಕಾಂಗ್ರೆಸ್‌ನಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದಾಗ ಗೆದ್ದು ಬಾ ಎಂದು ಹರಸಿದ್ದರು. ನಂತರದಲ್ಲಿ ರಾಮಭಟ್ಟರು ನನಗೆ ಕಾಂಗ್ರೆಸ್‌ಗೆ ಮತನೀಡಲು ಮನಸ್ಸು ಒಪ್ಪುತ್ತಿಲ್ಲ ಎಂದು ಹೇಳಿರುವುದು ಈ ಸಂದರ್ಭದಲ್ಲಿ ಪ್ರಸ್ತುತ. ರಾಮಭಟ್ಟರ ಆಶೀರ್ವಾದದ ಫಲವಾಗಿ ಪುತ್ತೂರು ಕ್ಷೇತ್ರದಲ್ಲಿ ಶಕುಂತಲಾ ಶೆಟ್ಟಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯಲ್ಲಿ ವಸಂತ ಬಂಗೇರ ಕಾಂಗ್ರೆಸ್‌ನಿಂದಲೂ, ಬೆಳ್ತಂಗಡಿಯಲ್ಲಿ ಅಭಯಚಂದ್ರ ಜೈನ್ ಕಾಂಗ್ರೆಸ್‌ನಿಂದಲೂ ಹಾಗೂ ಸುಳ್ಯದಲ್ಲಿ ಎಸ್.ಅಂಗಾರ (ಬಿಜೆಪಿ)ಯಿಂದ ವಿಜಯಿಯಾಗಿದ್ದಾರೆ. ದಕ್ಷಿಣ ಕನ್ನಡ ವಿಧಾನ ಸಭೆಯ ಒಟ್ಟು ೮ ಕ್ಷೇತ್ರಗಳಲ್ಲಿ ೭ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಬಿಜೆಪಿ ಕಡಿಮೆ ಅಂತರದಲ್ಲಿ ಗೆದ್ದುಕೊಂಡು ತನ್ನ ಮರ್‍ಯಾದೆ ಉಳಿಸಿಕೊಂಡಿದೆ.
ಉಡುಪಿ ಜಿಲ್ಲೆಯ ೫ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ೩ ಸ್ಥಾನಗಳನ್ನೂ, ಬಿಜೆಪಿ ಹಾಗೂ ಪಕ್ಷೇತರ ತಲಾ ಒಂದು ಸ್ಥಾನದಲ್ಲಿ ಗೆಲುವು ಸಾದಿಸಿದೆ. ಕಾಪು ಕ್ಷೇತ್ರದಲ್ಲಿ ವಿನಯ ಕುಮಾರ್ ಸೊರಕೆ ಬಿಜೆಪಿಯ ಲಾಲಾಜಿ ಆರ್ ಮೆಂಡನ್ ಅವರನ್ನು ಅತ್ಯಂತ ಕಡಿಮೆ ಅಂತರದ ಮತಗಳಿಂದ ಸೋಲಿಸಿ ಜಯಬೇರಿ ಗಳಿಸಿದ್ದಾರೆ. ಕಾಂಗ್ರೆಸ್‌ನ ವಸಂತ ಸಾಲ್ಯಾನ್ ಸೀಟ್ ಸಿಗಲಿಲ್ಲ ಎನ್ನುವ ಕಾರಣಕ್ಕೆ ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಆದರೆ ಇವರ ಸ್ಪರ್ಧೆಯಿಂದ ಎರಡು ಪಕ್ಷಗಳಿಗೂ ಪರಿಣಾಮ ಬೀರಿರುವುದು ಸ್ಪಷ್ಟವಾಗಿ ಗೋಚರಿಸಿದೆ. ಉಡುಪಿಯಲ್ಲಿ ಕಾಂಗ್ರೆಸ್‌ನ ಪ್ರಮೋದ್ ಮಧ್ವರಾಜ್ ಅತ್ಯಂತ ಅಧಿಕ ಮತಗಳ ಅಂತರದಿಂದ ಸಮೀಪದ ಸ್ಪರ್ಧಿ ಸುಧಾಕರ ಶೆಟ್ಟಿ ಅವರನ್ನು ಸೋಲಿಸಿದ್ದಾರೆ. ಕಾರ್ಕಳದಲ್ಲಿ ಕಾಂಗ್ರೆಸ್‌ನ ಗೋಪಾಲ ಭಂಡಾರಿ ಅವರನ್ನು ಬಿಜೆಪಿಯ ಸುನಿಲ್ ಕುಮಾರ್ ನಾಲ್ಕು ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸುಕುಮಾರ ಶೆಟ್ಟಿ ಅವರನ್ನು ಸೋಲಿಸಿದ ಗೋಪಾಲ ಪೂಜಾರಿ ವಿಧಾನ ಸಭೆಯನ್ನು ಒಂದು ಅವದಿಯ ಅಂತರದಲ್ಲಿ ಮತ್ತೊಮ್ಮೆ ಪ್ರವೇಶಿಸಿದ್ದಾರೆ.
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ತ್ರಿಕೋನ ಸ್ಪರ್ಧೆ ನಿರ್ಮಾಣವಾಗಿತ್ತು ಎನ್ನುವುದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ತಿಳುವಳಿಕೆಯಾಗಿತ್ತು. ಆದರೆ ಈ ಕ್ಷೇತ್ರದಲ್ಲಿ ಎಂದೂ ಕೂಡ ತ್ರಿಕೋನ ಸ್ಫರ್ದೆಯ ಯಾವುದೇ ಒಂದು ಕುರುಹು ಕೂಡ ಇರಲಿಲ್ಲ. ಚುನಾವಣೆಗೆ ಮುಂಚಿತವಾಗಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ವಿಜಯಿ ಎನ್ನುವುದು ಕಾಂಗ್ರೆಸ್ ಪಕ್ಷದ ನಾಯಕರಿಗೂ ಹಾಗೂ ಬಿಜೆಪಿಯ ನಾಯಕರಿಗೂ ತಿಳಿದಿತ್ತು. ಆದರೆ ಶೆಟ್ಟರ ಅಭಿಮಾನಿಗಳಿಗೆ ಮಾತ್ರ ಕಳೆದ ಬಾರಿಗಿಂತ ಅತ್ಯಂತ ಅಂತರದಲ್ಲಿ ಗೆಲುವು ಸಾಧಿಸಬೇಕೆಂಬ ಛಲವಿತ್ತು. ಕಾರ್ಯಕರ್ತರಲ್ಲಿ ನಿಷ್ಠೆಯಿತ್ತು. ಶ್ರೀನಿವಾಸಣ್ಣನ ಹೆಸರಿನ ವರ್ಚಸ್ಸು ಕ್ಷೇತ್ರದಲ್ಲಿ ನೆಲೆಯಾಗಿತ್ತು. ಅಭಿಮಾನಿಗಳ ಬೆವರು ಹರಿಸಿ-ಸ್ವಂತ ಖರ್ಚಿನಲ್ಲಿ ಕಾರ್ಯ ನಿರ್ವಹಿಸಿದ್ದರು. ವಿಧಾನ ಸಭಾ ಚುನಾವಣೆಯ ಇತಿಹಾಸದಲ್ಲೇ ಯಾವುದೇ ರಾಷ್ಟ್ರೀಯ ಪಕ್ಷದ ಬೆಂಬಲವಿಲ್ಲದೇ, ಹೆಸರಿನ ವರ್ಚಸ್ಸಿನಿಂದಲೇ, ಹಣಕಾಸಿನ ಹರಿವಿಲ್ಲದೇ ಪಕ್ಷೇತರ ಅಭ್ಯರ್ಥಿಯಾಗಿ ೪೦೬೧೧ ಮತಗಳ ಅಂತರದಲ್ಲಿ ಗೆಲುವು ಸಾಧಿಸಿರುವುದು ದಾಖಲೆಯಾಗಿದೆ. ಕಳೆದ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಯಿಂದ ಸ್ಪರ್ಧಿಸಿದ್ದ ಶ್ರೀನಿವಾಸ ಶೆಟ್ಟಿ ೨೫೦೦೦ ಮತಗಳನ್ನು ಪಡೆದಿದ್ದರು. ಹಾಲಾಡಿ ಅವರ ಗೆಲುವನ್ನು ಗಮನಿಸಿದ ಕಾಂಗ್ರೆಸ್‌ನ ಕೇಂದ್ರದ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಹಾಲಾಡಿಯವರನ್ನು ತಮ್ಮ ಪಕ್ಷದ ಅಭ್ಯರ್ಥಿಯಂತೆ ಶ್ಲಾಘಿಸಿರುವುದು ಗಮನಾರ್ಹ.
ಆದರೆ ಬಿಜೆಪಿಯ ಭದ್ರ ಕೋಟೆಯಾಗಿದ್ದ ಕರಾವಳಿಯಲ್ಲಿ ಬಿಜೆಪಿಯ ಹಿನ್ನಡೆಗೆ ಕಾರಣವಾದ ಅಂಶಗಳಾವುವು. ಅವಿಭಜಿತ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳಾಗಿದ್ದರೂ, ಜನತೆ ಗುರುತಿಸಿದ ಅಂಶಗಳಾವು? ೫ ವರ್ಷಗಳ ಅವಧಿಗೆ ಅಧಿಕಾರ ನೀಡಿದ ಬಿಜೆಪಿ ನಾಯಕರಿಗೆ ಕಾರ್ಯಕರ್ತರನ್ನು ಯಾವ ರೀತಿ ಬಳಸಿಕೊಳ್ಳಬೇಕು ಎನ್ನುವ ಸಾಮಾನ್ಯ ಪರಿಜ್ಞಾನವಿಲ್ಲದಂತೆ ವರ್ತಿಸಿರುವುದು ಕಾರಣವೇ? ಕರಾವಳಿ ಭಾಗದಲ್ಲಿ ಅತಿಯಾಗಿ ನಡೆಯುವ ಕೋಮು-ಸಂಘರ್ಷ ಕಾರಣವೇ? ಬಿಜೆಪಿಯವರು ಹಿಂದುತ್ವದ ಸೋಗಿನಲ್ಲಿ ಯುಗಾದಿ, ಹಿಂದು ಸಮಾಜೋತ್ಸವ, ಸಾಂಘಿಕ ಎನ್ನುವ ಕಾರ್ಯಗಳನ್ನು ಮಾಡುತ್ತಾ ಆ ಸಂದರ್ಭದಲ್ಲಿ ಮಾತ್ರ ಕಾರ್ಯಕರ್ತರ ನೆನಪು ಮಾಡಿಕೊಂಡು ಉಳಿದ ಸಮಯದಲ್ಲಿ ನಿರ್ಲಕ್ಷ್ಯ ತಾಳಿದ್ದರ ಫಲವೇ? ಆರ್‌ಎಸ್‌ಎಸ್‌ನ ನಾಯಕರು ಸಮಾಜ ಸೇವೆಗಾಗಿ ತಮ್ಮ ಬದುಕನ್ನು ಮೀಸಲಿಟ್ಟು, ಅಖಂಡ ಭಾರತದ ಕಲ್ಪನೆ ಸಾಕಾರಗೊಳ್ಳುವಲ್ಲಿ ಶ್ರಮಿಸುತ್ತಿರುವ ವರ್ಗ ಒಂದೆಡೆಯಾದರೆ ಅಲ್ಲಿರುವ ಸ್ವಾರ್ಥ ತುಂಬಿರುವವರಿಂದ ಬಿಜೆಪಿಗೆ ಇಂಥ ಗತಿ ಬಂದಿದೆಯೇ? ಸಣ್ಣ ಉದಾಹರಣೆ ನೀಡುವುದಾದರೆ ಬಿಜೆಪಿ ವಿಧಾನ ಪರಿಷತ್ ಸದಸ್ಯರೊರ್ವರ ಮಗ ಆರ್‌ಎಸ್‌ಎಸ್‌ನ ಜಿಲ್ಲಾ ಪ್ರಚಾರಕರಾಗಿ ಕಳೆದೆರಡು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಂತ ಪ್ರಚಾರಕರ ಅನುಮತಿಯಿಲ್ಲದೇ ಬಿಜೆಪಿಯ ಕಾರ್ಯಾಲಯದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಹಿಂದಿರುವ ಸ್ವಾರ್ಥವೆಂಥದ್ದು? ಬಿಜೆಪಿ ನಾಯಕರ ಅಹಂ, ಸ್ವಾರ್ಥಪರತೆ, ಕಾರ್ಯಕರ್ತರ ನಿರ್ಲಕ್ಷ್ಯದಿಂದಾಗಿ ೨೦೧೩ರ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಸರಿಯಾಗಿ ಪಾಠ ಕಲಿಸಿದ್ದಾನೆ ಎನ್ನುವುದು ಸ್ಪಷ್ಟ. ಇದು ಕೇವಲ ಬಿಜೆಪಿಗೆ ಮಾತ್ರವಲ್ಲ. ಕಾಂಗ್ರೆಸ್‌ಗೂ ಕೂಡ ಇದು ಪೂರ್ವ ಪಾಠವೆನ್ನುವುದನ್ನು ಅರಿತುಕೊಂಡು ಆಡಳಿತ ನಿರ್ವಹಿಸಬೇಕು. ಇದನ್ನು ಮರೆತು ಸಾಗಿದರೆ ಇಂದು ಬಿಜೆಪಿಗಾದ ಗತಿಯೇ ಕಾಂಗ್ರೆಸ್‌ಗೂ ಆಗಲಿದೆ ಎನ್ನುವ ಎಚ್ಚರಿಕೆಯ ಘಂಟೆಯೇ ಈ ಮತದಾನವೆನ್ನುವುದರಲ್ಲಿ ಸಂಶಯವಿಲ್ಲಾ...
ಏನಂತಿರಾ
 ಬಾಕ್ಸ್:
ಕರಾವಳಿಯಲ್ಲಿ ವಿಜೇತರಾದ ಅಭ್ಯರ್ಥಿಗಳಿವರು:
                 ದಕ್ಷಿಣ ಕನ್ನಡ ಜಿಲ್ಲೆ:
  ಕ್ಷೇತ್ರ                   ಅಭ್ಯರ್ಥಿಗಳು                      ವಿಜಯಿ ಮತ
*ಮಂಗಳೂರು ಕ್ಷೇತ್ರ      : ಯು.ಟಿ.ಖಾದರ್ (ಕಾಂಗ್ರೆಸ್)-        ೨೯,೧೧೧
*ಮಂಗಳೂರು ಉತ್ತರ    : ಮೊದಿನ್ ಬಾವ   (ಕಾಂಗ್ರೆಸ್)-       ೫,೩೨೩
*ಮಂಗಳೂರು ದಕ್ಷಿಣ     : ಜೆ.ಆರ್.ಲೋಬೊ (ಕಾಂಗ್ರೆಸ್)-      ೧೨,೨೭೫
*ಬಂಟ್ವಾಳ              : ಬಿ.ರಮಾನಾಥ ರೈ  (ಕಾಂಗ್ರೆಸ್)-      ೧೭,೮೫೦
*ಪುತ್ತೂರು              :ಶಕುಂತಲಾ ಶೆಟ್ಟಿ    (ಕಾಂಗ್ರೆಸ್)  -     ೪,೨೮೯
*ಬೆಳ್ತಂಗಡಿ              :ವಸಂತ ಬಂಗೇರ  (ಕಾಂಗ್ರೆಸ್)   -     ೧೫,೭೪೧
*ಮೂಡಬಿದ್ರೆ            :ಅಭಯಚಂದ್ರ ಜೈನ್(ಕಾಂಗ್ರೆಸ್)-        ೪,೪೫೦
*ಸುಳ್ಯ                  : ಎಸ್.ಅಂಗಾರ   (ಬಿಜೆಪಿ)         -   ೧,೩೭೩

ಉಡುಪಿ ಜಿಲ್ಲೆ:
*ಕುಂದಾಪುರ          : ಹಾಲಾಡಿ ಶ್ರೀನಿವಾಸ ಶೆಟ್ಟಿ (ಪಕ್ಷೇತರ)- ೪೦,೬೧೧
*ಬೈಂದೂರು          : ಗೋಪಾಲ ಪೂಜಾರಿ (ಕಾಂಗ್ರೆಸ್)-      ೩೧,೧೪೯
*ಕಾರ್ಕಳ             :ಸುನಿಲ್ ಕುಮಾರ್    (ಬಿಜೆಪಿ) -        ೪,೨೫೪
*ಉಡುಪಿ             : ಪ್ರಮೋದ್ ಮಧ್ವರಾಜ್(ಕಾಂಗ್ರೆಸ್)-    ೩೯,೫೨೪
*ಕಾಪು                :ವಿನಯ ಕುಮಾರ್ ಸೊರಕೆ(ಕಾಂಗ್ರೆಸ್)-    ೧,೮೫೫











ಅವಿಭಜಿತ ದಕ್ಷಿಣ ಕನ್ನಡ-ಮತ್ತು ಉಡುಪಿ ವಿಧಾನ ಸಭಾ ಕ್ಷೇತ್ರ ಪರಿಚಯ:
ರಾಜ್ಯದ ಮೂರು ಕರಾವಳಿ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಕೃಷಿ ಪ್ರಧಾನವಾದ ಜಿಲ್ಲೆಗಳಾಗಿವೆ. ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿರುವ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬ್ಯಾಂಕಿಂಗ್ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಪ್ರಗತಿ ಸಾಸಿದೆ. ಇತ್ತೀಚಿಗಿನ ವರ್ಷಗಳಲ್ಲಿ ಕೈಗಾರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿಯೂ ಕೂಡ ಅಭಿವೃದ್ಧಿಯತ್ತ ಸಾಗುತ್ತಿರುವ ಜಿಲ್ಲೆ ಇದಾಗಿದೆ. ಇಲ್ಲಿ ಶೈಕ್ಷಣೀಕವಾಗಿ ಪ್ರಗತಿ ಹೊಂದಿದ್ದು, ದೂರದ ಇತರ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಆಗಮಿಸುತ್ತಾರೆ ಎನ್ನುವುದಕ್ಕೆ ಇಲ್ಲಿರುವ ಶಿಕ್ಷಣ ಸಂಸ್ಥೆಗಳು ಹಾಗೂ ಪ್ರತಿವರ್ಷ ಇತರರಿಗೆ ಬಿಟ್ಟುಕೊಡದ ಪಿಯುಸಿ ಮತ್ತು ೧೦ ತರಗತಿಯ ಫಲಿತಾಂಶಗಳು. ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಇಲ್ಲಿನ ಜನರ ಜೀವನ ಶೈಲಿ, ಆಚರಿಸುವ ಧಾರ್ಮಿಕ-ಆಚರಣೆಗಳಿಂದಾಗಿ ರಾಜ್ಯದಲ್ಲಿಯೇ ಗುರುತಿಸಿಕೊಂಡಿದೆ. ತುಳುನಾಡಿನ ಗಂಡುಕಲೆಯೆನಿಸಿಕೊಂಡ ಯಕ್ಷಗಾನದಿಂದ ದೇಶ ವಿದೇಶದಲ್ಲಿಯೇ ಗುರುತಿಸಿಕೊಂಡು ಅಮೇರಿಕಾದಲ್ಲಿ ನಡೆಯುವ ಅಕ್ಕಾ ಸಮ್ಮೇಳನದಲ್ಲಿ ಪ್ರದರ್ಶನಗೈದಿದೆ. ತುಳು ಪಾಡ್ದನ, ಭೂತಕೋಲ, ಕೋಳಿ ಅಂಕ, ಕಂಬಳ ಇತ್ಯಾದಿ ಒಂದೆ ಎರಡೇ ತುಳುನಾಡಿನ ಸಾಂಸ್ಕೃತಿಕ ಸೊಗಡನ್ನು ಬಣ್ಣಿಸಲು ಸಾಧ್ಯವಿಲ್ಲ. ಇತರ ಪ್ರದೇಶಗಳಿಗೆ ಹೋಲಿಸಿದರೆ ಕರಾವಳಿ ಎಂದಾಕ್ಷಣ ನೀವು ಬುದ್ದಿವಂತರು ಮರಾಯ್ರೆ ಎನ್ನುವ ಮಾತುಗಳು ಸರ್ವೇ ಸಾಮಾನ್ಯವಾಗಿದೆ.
ಮೇ.೫ ರಂದು ನಡೆಯುವ ವಿಧಾನ ಸಭಾ ಚುನಾವಣೆಯ ಬಿಸಿ ರಾಜ್ಯದಲ್ಲಿಯೇ ಮಾತ್ರವಲ್ಲದೇ ಕರಾವಳಿಯ ೨ ಜಿಲ್ಲೆಗಳಲ್ಲಿಯೂ ವ್ಯಾಪಿಸಿದೆ. ಎಲ್ಲಾ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕೆನ್ನುವ ನೆಲೆಯಲ್ಲಿ ತೀವ್ರ ಪೈಪೋಟಿಯ ಬಿರುಸಿನ ಪ್ರಚಾರ ಕೈಗೊಳ್ಳುತ್ತಿವೆ. ಆ ನಿಟ್ಟಿನಲ್ಲಿ ಸಂಕ್ಷಿಪ್ತವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಸಭಾ ಕ್ಷೇತ್ರದ ಕಿರು ಪರಿಚಯ:
ದಕ್ಷಿಣ ಕನ್ನಡ ಒಟ್ಟು ೮ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ ಸುಮಾರು ೧೪.೭೦ ಲಕ್ಷ ಮತದಾರರಿದ್ದಾರೆ. ಇದರಲ್ಲಿ ಅರ್ಧಾಂಶಕ್ಕಿಂತಲೂ ಅಕ ಮಹಿಳೆಯರಾಗಿದ್ದಾರೆ. ೧೯೫೭ರಿಂದ ೨೦೦೮ ರವರೆಗೆ ಜಿಲ್ಲೆಯಲ್ಲಿ ೧೧ವಿಧಾನ ಸಭಾ ಚುನಾವಣೆಗಳು ನಡೆದಿವೆ. ಬಹುತೇಕ ಪುರುಷರೇ ರ್ಸ್ಪಗಳು. ವಿಜೇತರು ಕೂಡ ಅವರೇ. ಈವರೆಗೆ ಕೇವಲ ನಾಲ್ಕು ಮಂದಿ ಮಹಿಳೆಯರು ಮಾತ್ರ ಶಾಸಕಿಯರಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚಿಗಿನ ರಾಜಕೀಯ ವಿದ್ಯಾಮಾನಗಳಲ್ಲಿ ಜಾತಿ ರಾಜಕೀಯ ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿದ್ದರೂ, ದಕ್ಷಿಣ ಕನ್ನಡ ಮಾತ್ರ ಇದಕ್ಕೆ ಹೊರತಾಗಿದೆ. ಇಲ್ಲಿನ ಜನರು ಜಾತಿಗಿಂತ ನೀತಿ, ತತ್ವ ಸಿದ್ದಾಂತ ಮತ್ತು ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಇತರ ಪ್ರದೇಶಗಳಂತೆ ಇಲ್ಲಿನ ಮತದಾರ ಜಾತಿಗೆ ಮನ್ನಣೆ ನೀಡಿರುವುದು ಇಲ್ಲಿ ಕಡಿಮೆಯಾಗಿದೆ. ರಾಜಕೀಯ ಪಕ್ಷಗಳ ಬಲದಿಂದ ಅತಿ ಸಣ್ಣ ಸಮುದಾಯದ ಅಭ್ಯರ್ಥಿಗಳು ಕೂಡ ಇಲ್ಲಿ ನಿರಾಯಾಸವಾಗಿ ಗೆಲುವು ಸಾಸಿದ್ದಾರೆ.
ದಕ್ಷಿಣ ಕನ್ನಡದ ೮ ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಅಂದರೆ ಮಂಗಳೂರು, ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ ಮತ್ತು ಮೂಡಬಿದ್ರೆ ಕ್ಷೇತ್ರಗಳು ಸಮುದ್ರ ತೀರಕ್ಕೆ ತಾಗಿಕೊಂಡಿವೆ. ಉಳಿದಂತೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ಇತರ ನಾಲ್ಕು ಕ್ಷೇತ್ರಗಳು.
ಮಂಗಳೂರು:
ಮಂಗಳೂರು ವಿಧಾನಸಭಾ ಕ್ಷೇತ್ರ ಸರ್ವ ಧರ್ಮ ಸಮನ್ವಯದ ಅಪೂರ್ವ ಪ್ರದೇಶ. ೧೫-೧೬ ನೇ ಶತಮಾನದಲ್ಲಿ ಪೋರ್ಚುಗೀಸರ ವಿರುದ್ದ ಸಮರ ಸಂಘಟಿಸಿ, ಜಗತ್ತಿನಾದ್ಯಂತ ಪ್ರಸಿದ್ದಿ ಪಡೆದ ಉಳ್ಳಾಲದ ರಾಣಿ ಅಬ್ಬಕ್ಕನ ಗೌರವಾರ್ಥ ಪ್ರತಿಮೆಯನ್ನು ಉಳ್ಳಾಲದಲ್ಲಿ ಸ್ಥಾಪಿಸಲಾಗಿದೆ. ರಾಣಿ ಅಬ್ಬಕ್ಕ ಪೂಜಿಸುತ್ತಿದ್ದ ಸೋಮೇಶ್ವರದ ಸೋಮನಾಥ ದೇವಾಲಯ ಮತ್ತು ಉಳ್ಳಾಲ ಸೈಯದ್ ಮದನಿ ದರ್ಗಾ ಇಲ್ಲಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳು. ಮಂಗಳೂರು ವಿಶ್ವವಿದ್ಯಾನಿಲಯ, ಕೆ.ಎಸ್.ಹೆಗ್ಡೆ ಆಸ್ಪತ್ರೆ ಮೆಡಿಕಲ್ ಕಾಲೇಜುಗಳು ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳು ಸೇರಿದಂತೆ ಕೆಲವು ಪ್ರಸಿದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳು ಈ ಕ್ಷೇತ್ರದ ವ್ಯಾಪ್ತಿಯಲ್ಲಿದೆ.
ಕ್ಷೇತ್ರದಲ್ಲಿ ಸುಮಾರು ೧.೭೦ಲಕ್ಷ ಮತದಾರರಿದ್ದಾರೆ. ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಅಕವಾಗಿದೆ. ಸತತ ಎರಡು ಬಾರಿ ಕಾಂಗ್ರೆಸ್‌ನಿಂದ ಜಯಗಳಿಸಿರುವ ಯುವಶಾಸಕ ಯು.ಟಿ.ಖಾದರ್ ಈ ಸಲ ಮೂರನೇ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ. ಅವರಿಗೆ ಪ್ರತಿರ್ಸಯಾಗಿ ಚಂದ್ರಹಾಸ್ ಉಳ್ಳಾಲ್ ಕಣದಲ್ಲಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರ:
ಮಂಗಳೂರು ನಗರ ದಕ್ಷಿಣ ಕ್ಷೇತ್ರ ಮಂಗಳೂರು ಮಹಾನಗರ ಪಾಲಿಕೆಯ ೬೦ ವಾರ್ಡ್‌ಗಳ ಪೈಕಿ ೩೮ ವಾರ್ಡ್‌ಗಳನ್ನೊಳಗೊಂಡಿದೆ. ಅತ್ಯಾಧುನಿಕವಾಗಿ ರೂಪುಗೊಳ್ಳುತ್ತಿರುವ ಮಂಗಳೂರು ನಗರವನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಸುಮಾರು ೨ ಲಕ್ಷ ಮತದಾರರಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರ, ಅಲೋಶಿಯಸ್ ಚಾಪೆಲ್, ಜೋಡುಪಳ್ಳಿ ದರ್ಗಾ ಕುದ್ರೋಳಿ ಸೇರಿದಂತೆ ಇತರ ಹಲವಾರು ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಈ ಕ್ಷೇತ್ರದಲ್ಲಿ ರಾಜ್ಯ ವಿಧಾನ ಸಭೆಯ ಉಪಸಭಾಪತಿಯಾಗಿರುವ ಎನ್.ಯೋಗೀಶ್ ಭಟ್ ಸತತ ನಾಲ್ಕು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಇಲ್ಲಿ ಜಯಗಳಿಸಿದ್ದಾರೆ. ಈ ಸಲ ೫ ನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದಿದ್ದಾರೆ. ಇವರಿಗೆ ಪ್ರತಿರ್ಸ್ಪಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಜೆ.ಆರ್.ಲೋಬೊ ಪ್ರಥಮ ಬಾರಿಗೆ ಚುನಾವಣಾ ಕಣದಲ್ಲಿದ್ದಾರೆ. ಇವರು ಮಂಗಳೂರು ಮಹಾನಗರ ಪಾಲಿಕೆಯ ಕಮೀಷನರ್ ಆಗಿ ಕಾರ್ಯ ನಿರ್ವಹಿಸಿದ್ದರು.
ಮಂಗಳೂರು ನಗರ ಉತ್ತರ:
ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ಮಹಾನಗರ ಪಾಲಿಕೆಯ ೨೨ ವಾರ್ಡ್‌ಗಳನ್ನು ಒಳಗೊಂಡಿದೆ. ಕರ್ನಾಟಕ ಕರಾವಳಿಯ ಪ್ರಗತಿಯ ಹೆಬ್ಬಾಗಿಲು ಎನ್ನುವ ಪ್ರತೀತಿ ಪಡೆದಿರುವ ನವ ಮಂಗಳೂರು ಬಂದರು, ಸುರತ್ಕಲ್‌ನ ಎನ್‌ಐಟಿಕೆ ಸಂಸ್ಥೆ ಹಾಗೂ ರಾಜ್ಯದ ಏಕೈಕ ರಸಗೊಬ್ಬರ ಕಾರ್ಖಾನೆ ಎಂಸಿಎಫ್ ಈ ಕ್ಷೇತ್ರದ ವ್ಯಾಪ್ತಿಯಲ್ಲಿದೆ.
ಸುಮಾರು ೨ ಲಕ್ಷ ಮತದಾರರನ್ನು ಹೊಂದಿರುವ ಈ ಕ್ಷೇತ್ರವನ್ನು ಸತತ ಎರಡು ಬಾರಿ ಬಿಜೆಪಿಯ ಕೃಷ್ಣ ಜೆ.ಪಾಲೆಮಾರ್ ಪ್ರತಿನಿಸಿದ್ದಾರೆ. ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಸದನದಲ್ಲಿ ನೀಲಿ ಚಿತ್ರ ನೋಡಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸಲ ಮೂರನೇ ಭಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಸರ್ಧೆಗೆ ಇಳಿದಿದ್ದಾರೆ. ಇವರಿಗೆ ಪ್ರತಿರ್ಸ್ಪಯಾಗಿ ಕಾಂಗ್ರೆಸ್‌ನ ಮೊದಿನ್ ಬಾವ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಅಕವಾಗಿದ್ದಾರೆ. ಇಲ್ಲಿ ಮುಸ್ಲಿಂ ಸಂಖ್ಯೆ ವಿಪರೀತವಾಗಿದ್ದು, ಮುಸ್ಲಿಂ ಅಭ್ಯರ್ಥಿ ಕಣದಲ್ಲಿರುವುದರಿಂದ ಇಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಗೆಲುವು ಯಾರ ಕಡೆಗಾಗಲಿದೆ ಎನ್ನುವುದನ್ನು ನಿರೀಕ್ಷಿಸುವುದು ಕಷ್ಟಸಾದ್ಯ. 
ಮೂಡಬಿದ್ರೆ:
ಜೈನ ಕಾಶಿಯೆಂದೆ ಪ್ರಸಿದ್ದಿ ಪಡೆದಿರುವ ಮೂಡಬಿದ್ರೆ ಮಂಗಳೂರು ತಾಲೂಕಿನಲ್ಲಿ ಬರುವ ಮತ್ತೊಂದು ವಿಧಾನ ಸಭಾ ಕ್ಷೇತ್ರ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಸಾವಿರ ಕಂಬದ ಬಸದಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಎಂಆರ್‌ಪಿಎಲ್ ತೈಲ ಸಂಸ್ಕಾರಣಾಗಾರ ಸೇರಿದಂತೆ ನುಡಿಸಿರಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ಈ ಕ್ಷೇತ್ರದ ವ್ಯಾಪ್ತಿಯಲ್ಲಿದೆ.
ಕಾಂಗ್ರೆಸ್ ಪಕ್ಷದ ಕೆ.ಅಭಯಚಂದ್ರ ಜೈನ್ ಸತತವಾಗಿ ಮೂರು ಬಾರಿ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಈ ಬಾರಿ ಮತ್ತೆ ನಾಲ್ಕನೇ ಸಲ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇವರಿಗೆ ಪ್ರತಿರ್ಸ್ಪಯಾಗಿ ಬಿಜೆಪಿಯಿಂದ ಉಮನಾಥ್ ಕೋಟ್ಯಾನ್ ಕಣದಲ್ಲಿದ್ದಾರೆ. ರಾಜಕೀಯವಾಗಿ ಅನುಭವವಿಲ್ಲದಿದ್ದರೂ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಅನೇಕ ಸಭೆ-ಸಮಾರಂಭಗಳಲ್ಲಿ ಭಾಗವಹಿಸಿದ ಕೀರ್ತಿ ಇವರಿಗಿದೆ. ಅಲ್ಲದೇ ಈ ಕ್ಷೇತ್ರದಲ್ಲಿ ಬಹಳ ಸಜ್ಜನ ಎನ್ನುವ ಹೆಸರು ಇವರ ಪಾಲಿಗಿದೆ.
ಬಂಟ್ವಾಳ:
ಬಂಟ್ವಾಳ ವಿಧಾನಸಭಾ ಕ್ಷೇತ್ರ ನೇತ್ರಾವತಿ ನದಿಯ ಇಕ್ಕೆಲಗಳಲ್ಲಿ ಹರಡಿಕೊಂಡಿದೆ. ಪೊಳಲಿ ಶ್ರೀ ರಾಜರಾಜೇಶ್ವರಿ ಮತ್ತು ಕಾರೀಂಜೇಶ್ವರ ಕ್ಷೇತ್ರ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳು. ಕೃಷಿ ಮತ್ತು ವ್ಯಾಪಾರ ಕೇಂದ್ರಿತವಾದ ಈ ಕ್ಷೇತ್ರದಲ್ಲಿ ಸುಮಾರು ೧.೯೬ ಲಕ್ಷ ಮತದಾರರಿದ್ದಾರೆ. ಕ್ಷೇತ್ರ ಬಹುತೇಕ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ. ಕ್ಷೇತ್ರದ ಶಾಸಕರಾಗಿರುವ ಕಾಂಗ್ರೆಸ್‌ನ ಬಿ.ರಮಾನಾಥ ರೈ ಐದು ಬಾರಿ ಬಂಟ್ವಾಳವನ್ನು ಪ್ರತಿನಿಸಿದ್ದಾರೆ. ಈ ಬಾರಿ ಮತ್ತೆ ಅದೃಷ್ಟ ಪರೀಕ್ಷೆಗಾಗಿ ಚುನಾವಣಾ ಕಣಕ್ಕಿಳಿದಿದ್ದಾರೆ. ಇವರಿಗೆ ಪ್ರತಿರ್ಸ್ಪಯಾಗಿ ಆರ್‌ಎಸ್‌ಎಸ್‌ನ ಸ್ವಯಂಸೇವಕನೆಂದು ಬಿಂಬಿತನಾಗಿ, ಸಾವಯವ ಕೃಷಿಯ ಮೂಲಕ ಜಿಲ್ಲೆಯಲ್ಲಿ ಮನೆಮಾತಾಗಿರುವ ಉಳೆಪ್ಪಾಡಿ ಗುತ್ತು ರಾಜೇಶ್ ನಾಕ್ ಬಿಜೆಪಿಯಿಂದ ರ್ಸ್ಪಸುತ್ತಿದ್ದಾರೆ. ರಾಜಕೀಯ ಅನುಭವವಿಲ್ಲದಿದ್ದರೂ, ಸ್ವಉದ್ಯಮಿಯಾಗಿರುವ ಇವರು ರೈಗಳನ್ನು ಸೋಲಿಸಿಯಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಬೆಳ್ತಂಗಡಿ:
ಬೆಳ್ತಂಗಡಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರದ ಕೆಲವು ಪ್ರದೇಶ ನಕ್ಸಲ್ ಬಾಧೆಗೊಳಗಾಗಿದೆ. ಹಚ್ಚ-ಹಸಿರಿನಿಂದ ಕೂಡಿರುವ ಈ ಕ್ಷೇತ್ರದಲ್ಲಿ ಅಡಿಕೆ, ತೆಂಗು, ರಬ್ಬರ್ ಮತ್ತು ಭತ್ತ ಪ್ರಮುಖ ಬೆಳೆಯಾಗಿದೆ. ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ದೇಶಕ್ಕೆ ಪರಿಚಿತವಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳ ಈ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ.
೧೯೫೭ರಲ್ಲಿ ಈ ಕ್ಷೇತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ರತ್ನವರ್ಮ ಹೆಗ್ಗಡೆ ಪ್ರತಿನಿಸಿದ್ದರು. ಕಳೆದ ೨೪ ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಬಂಗೇರ ಸಹೋದರರು ಪರಸ್ಪರ ರ್ಸಗಳಾಗಿದ್ದರು. ಈ ಬಾರಿ ಅದು ಅಂತ್ಯವಾಗಿದೆ. ಮೂರು ಬಾರಿ ಶಾಸಕರಾಗಿರುವ ವಸಂತ ಬಂಗೇರ ಮತ್ತೆ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಕಣದಲ್ಲಿದ್ದಾರೆ. ಅವರ ವಿರುದ್ದ ಬಿಜೆಪಿಯಿಂದ ರ್ಸ್ಪಸುತ್ತಿದ್ದ ಸಹೋದರ ಪ್ರಬಾಕರ ಬಂಗೇರ ಈ ಬಾರಿ ರ್ಸಸುತ್ತಿಲ್ಲ. ಬಿಜೆಪಿಯಿಂದ ಈಬಾರಿ ರಂಜನ್ ಗೌಡ ಯುವಕ ರ್ಸ್ಪಸುತ್ತಿದ್ದಾರೆ.
ಪುತ್ತೂರು:
ಪುತ್ತೂರು ವಿಧಾನ ಸಭಾ ಕ್ಷೇತ್ರ ಕಂದಾಯ ಉಪ ವಿಭಾಗವನ್ನು ಹೊಂದಿದೆ. ಅಡಿಕೆ ಮತ್ತು ರಬ್ಬರ್ ಇಲ್ಲಿನ ಪ್ರಮುಖ ಬೆಳೆಗಳು. ಪುತ್ತೂರಿನ ಮಹಾಲಿಂಗೇಶ್ವರ ಮತ್ತು ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ಪ್ರಮುಖ ದೇವಸ್ಥಾನಗಳು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಎರಡು ಬಾರಿ ಪುತ್ತೂರು ಕ್ಷೇತ್ರವನ್ನು ಪ್ರತಿನಿಸಿದ್ದರು. ಈ ಕ್ಷೇತ್ರದಿಂದ ಇಬ್ಬರು ಮಹಿಳೆಯರು ಶಾಸಕಿಯರಾಗಿ ಆಯ್ಕೆಯಾಗಿದ್ದಾರೆ.
ಈಗ ಶಾಸಕಿಯಾಗಿರುವ ಮಲ್ಲಿಕಾ ಪ್ರಸಾದ್ ಈ ಬಾರಿ ಕಣದಿಂದ ಹಿಂದೆ ಸರಿದಿದ್ದಾರೆ. ೨೦೦೪ರಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಟಿ.ಶಕುಂತಲಾ ಶೆಟ್ಟಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಸಂಜೀವ ಮಠಂದೂರು ರ್ಸ್ಪಸುತ್ತಿದ್ದಾರೆ. ಕ್ಷೇತ್ರದಲ್ಲಿ ಸುಮಾರು ೧.೮೦ಲಕ್ಷ ಮತದಾರರಿದ್ದಾರೆ.
ಸುಳ್ಯ:
ಕೊಡಗು ಜಿಲ್ಲೆಗೆ ತಾಗಿಕೊಂಡಿರುವ ವಿಧಾನಸಭಾ ಕ್ಷೇತ್ರ ಸುಳ್ಯ. ರಾಜ್ಯದಲ್ಲಿ ಅತ್ಯಕ ಆದಾಯವಿರುವ ಮುಜರಾಯಿ ಇಲಾಖೆಯ ಅನದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಅಡಿಕೆ ಮತ್ತು ರಬ್ಬರ್ ಇಲ್ಲಿನ ಪ್ರಮುಖ ಬೆಳೆಯಾಗಿದೆ.
ಸುಳ್ಯ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವಾಗಿದ್ದು, ಬಿಜೆಪಿಯ ಎಸ್ ಅಂಗಾರ ಸತತವಾಗಿ ನಾಲ್ಕು ಬಾರಿ ಇಲ್ಲಿಂದ ಚುನಾಯಿತರಾಗಿದ್ದಾರೆ. ಈ ಸಲ ಮತ್ತೆ ಅದೃಷ್ಟ ಪರೀಕ್ಷಿಸಲು ಚುನಾವಣಾ ಕಣದಲ್ಲಿದ್ದಾರೆ. ಇವರಿಗೆ ಪ್ರತಿರ್ಸ್ಪಯಾಗಿ ಕಾಂಗ್ರೆಸ್‌ನಿಂದ ಬಿ.ರಘು ಕಣದಲ್ಲಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಹಲವಾರು ದೇವಸ್ಥಾನಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬೀಚ್‌ಗಳು ಕಾಣಸಿಗುತ್ತವೆ. ಅಂತೆಯೇ ಉಡುಪಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಿದ್ದು, ಕಾಪು, ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರುಗಳಾಗಿವೆ. 
ಕಾಪು ಕ್ಷೇತ್ರ:
ಕಾಪು ಬೀಚ್, ಮಾರಿಯಮ್ಮ ದೇವಸ್ಥಾನಗಳಿಂದ ಪ್ರಸಿದ್ದಗೊಂಡಿದ್ದು, ನೂತನವಾಗಿ ಯುಪಿಸಿಎಲ್ ವಿದ್ಯುತ್ ಘಟಕ ಸ್ಥಾಪನೆಗೊಂಡು ರಾಜ್ಯದಾದ್ಯಂತ ಜನಜನಿತವಾಗಿದೆ. ಕಾಪು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಸಾಂಸದರಾಗಿ ಆಯ್ಕೆಗೊಂಡಿದ್ದ ವಿನಯ ಕುಮಾರ್ ಸೊರಕೆ ಈ ಬಾರಿ ಕಾಪು ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ರ್ಸ್ಪಸುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ವಸಂತ ವಿ.ಸಾಲ್ಯಾನ್ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಬಿಜೆಪಿಯಿಂದ ಜಯಗಳಿಸಿದ್ದ ಲಾಲಾಜಿ ಮೆಂಡನ್ ಈಬಾರಿ ಬಿಜೆಪಿಯಿಂದ ರ್ಸ್ಪಸುತ್ತಿದ್ದಾರೆ. ಕಾಪು ಕ್ಷೇತ್ರ ಮೂವರು ಘಟಾನುಗಟಿಗಳಾಗಿದ್ದು, ವಿಜಯ ಮಾಲಿಕೆ ಯಾರಿಗೆ ದೊರೆಯುತ್ತದೆ ಎಂದು ಕಾದು ನೋಡಬೇಕಿದೆ.
ಉಡುಪಿ:
ಉಡುಪಿ ನಗರ ಸಭೆ, ಜಿಲ್ಲಾ ಪಂಚಾಯತ್‌ಗಳು ಕ್ಷೇತ್ರದ ವ್ಯಾಪ್ತಿಯಲ್ಲಿದ್ದು, ಹಲವು ವರ್ಷಗಳಿಂದ ಬಿಜೆಪಿಯ ಸುರ್ಪಯಲ್ಲಿದ್ದ ನಗರಸಭೆಯನ್ನು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಡೆದುಕೊಂಡಿದೆ. ಮಲ್ಪೆ ಬೀಚ್, ಶ್ರೀಕೃಷ್ಣ ಮಠ, ಮಣಿಪಾಲ ವಿಶ್ವವಿದ್ಯಾನಿಲಯ ಹಾಗೂ ಆಸ್ಪತ್ರೆಗಳನ್ನು ಒಳಗೊಂಡಿದೆ. ಎರಡು ಬಾರಿ ಶಾಸಕರಾಗಿದ್ದ ಬಿಜೆಪಿಯ ರಘುಪತಿ ಭಟ್ ಜನಪರ ಕಾರ್ಯಗಳನ್ನು ಮಾಡಿದ್ದರೂ, ನೀಲಿ ಚಿತ್ರ ಹಗರಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. ಅವರ ಸ್ಥಾನವನ್ನು ತುಂಬಲು ಸುಧಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಅವರ ಎದುರಾಳಿ ಯುವ ಉದ್ಯಮಿ ಕಾಂಗ್ರೆಸ್‌ನ ಪ್ರಮೋದ್ ಮಧ್ವರಾಜ್ ಕಣದಲ್ಲಿದ್ದಾರೆ.
ಕಾರ್ಕಳ:
ಗೋಮಟೇಶ್ವರನಿಂದಲೇ ಪ್ರಸಿದ್ದಿಯಾದ ಕಾರ್ಕಳದಲ್ಲಿ ತಾಲೂಕು ಕೇಂದ್ರವಾಗಿದ್ದು, ಹಲವಾರು ಶಿಕ್ಷಣ ಸಂಸ್ಥೆಗಳಿವೆ. ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಎರಡು ಬಾರಿ ಆಯ್ಕೆಗೊಂಡ ಗೋಪಾಲ ಭಂಡಾರಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದಾರೆ. ಒಮ್ಮೆ ಇದೆ ಕಣದಲ್ಲಿ ಗೋಪಾಲ ಭಂಡಾರಿಯವರನ್ನು ಸೋಲಿಸಿದ ಬಿಜೆಪಿಯ ಸುನಿಲ್ ಕುಮಾರ್ ಈ ಬಾರಿ ಅವರ ಪ್ರತಿರ್ಸ್ಪಯಾಗಿದ್ದಾರೆ. ಒಮ್ಮೆ ಭಂಡಾರಿ ಗೆಲುವು ಸಾಸಿದ ನಂತರ ಕಾರ್ಕಳದ ಜನತೆ ಸುನಿಲ್ ಕುಮಾರ್ ಅವರನ್ನು ಆಯ್ಕೆಗೊಳಿಸಿತ್ತು. ಆದರೆ ಸುನಿಲ್ ಕುಮಾರ್ ತನ್ನನ್ನು ಅಭಿವೃದ್ದಿ ಕೊಂಡ ಹೊರತಾಗಿ ಜನತೆಯ ಕಷ್ಟಗಳಿಗೆ ಸ್ಪಂದಿಸದ ಕಾರಣ ಕಳೆದ ಚುನಾವಣೆಯಲ್ಲಿ ಸೋಲಿಸಿದ್ದು ಮಾತ್ರವಲ್ಲದೇ ಕಳೆದ ವರ್ಷ ನಡೆದ ಎಂಪಿ ಚುನಾವಣೆಯಲ್ಲಿಯೂ ಕಾಂಗ್ರೆಸ್‌ನ ಜಯಪ್ರಕಾಶ ಹೆಗ್ಡೆ ಅವರ ವಿರುದ್ದವೂ ಹೇಳ ಹೆಸರಿಲ್ಲದಂತೆ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂದು ನಿರೀಕ್ಷಿಸುವುದು ಕಷ್ಟಸಾಧ್ಯ.
ಕುಂದಾಪುರ ಕ್ಷೇತ್ರ:
ಸೌಕೂರು ದುರ್ಗಾಪರಮೇಶ್ವರಿ, ಮಂದಾರ್ತಿ ದುರ್ಗೆ, ಕಮಲಶಿಲೆ ಬ್ರಾಹ್ಮೀ, ಮಡಾಮಕ್ಕಿ ವೀರಭದ್ರ ಒಂದೆ ಎರಡೆ ಅನೇಕ ದೇವಸ್ಥಾನಗಳನ್ನೊಳಗೊಂಡು ಕುಂದಾಪುರ ಕನ್ನಡವೆನ್ನುವ ಭಾಷೆಯನ್ನು ಒಳಗೊಂಡ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಶೆಟ್ಟರ್ ಪಕ್ಷರಚನೆಯ ಸಂದರ್ಭ ಮಂತ್ರಿಗಿರಿ ಕೊಡಿಸುತ್ತೇನೆ ಎಂದು ಬೆಂಗಳೂರಿಗೆ ಕರೆಸಿಕೊಂಡು, ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡಿದ ಹಾಲಾಡಿಯ ನಡೆ ಕಳೆದ ೬ ತಿಂಗಳಿನಿಂದ ನಿಗೂಡವಾಗಿತ್ತು. ಬೆಂಬಲಿಗರ ಒತ್ತಾಯದಿಂದ ಮೂರು ಬಾರಿ ಗೆದ್ದಿರುವ ಹಾಲಾಡಿ ಇಂದು ಪಕ್ಷೇತರರಾಗಿ ರ್ಸ್ಪಸುತ್ತಿದ್ದಾರೆ. ಇವರಿಗೆ ಎದುರಾಳಿಯಾಗಿ ಕಾಂಗ್ರೆಸ್‌ನ ಮಲ್ಯಾಡಿ ಶಿವರಾಮ ಶೆಟ್ಟಿ ಹಾಗೂ ಬಿಜೆಪಿಯಿಂದ ಕಿಶೋರ್ ಕುಮಾರ್ ಎನ್ನುವ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹಾಲಾಡಿ ಅವರಿಗೆ ಜಾತಿ ಮತಕ್ಕಿಂತಲೂ ಹೆಚ್ಚಾಗಿ ಮಧ್ಯಮ ಹಾಗೂ ಬಡ ಜನತೆಯ ಮತಗಳು ಸಿಗಲಿವೆ. ಕಳೆದ ವರ್ಷ ಸುಮಾರು ೨೫ ಸಾವಿರ ಮತಗಳ ಅಂತರದಲ್ಲಿ ಗೆದ್ದ ಹಾಲಾಡಿ ಈ ಬಾರಿ ಅದಕ್ಕಿಂತಲೂ ಅಕ ಮತಗಳಿಂದ ಗೆಲ್ಲುತ್ತಾರೆ ಎನ್ನುವ ಮಾತುಗಳು ಈ ವಲಯದಲ್ಲಿ ಕೇಳಿಬರುತ್ತಿದೆ.
ಬೈಂದೂರು ಕ್ಷೇತ್ರ:
ಕುಂದಾಪುರ ತಾಲೂಕಿನ ಗಡಿಬಾಗ ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕೆ, ಮಾರಣಕಟ್ಟೆ ಬ್ರಹ್ಮಲಿಂಗೇಶ್ವರನ ಸನ್ನಿದಿಗಳು ಬರುತ್ತವೆ. ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಿರುವ ಕೊಲ್ಲೂರು ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರರಾಗಿ ಕಾರ್ಯ ನಿರ್ವಹಿಸಿದ ಬಿ.ಎಂ.ಸುಕುಮಾರ ಶೆಟ್ಟಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಅವರ ಎದುರಾಳಿಯಾಗಿ ಹಲವು ವರ್ಷಗಳಿಂದ ಗೆಲುವು ಸಾಸಿದ ಗೋಪಾಲ ಪೂಜಾರಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡದ ಜನತೆ ಬುದ್ದಿವಂತರು ಎಂದು ಹೇಳುತ್ತಿದ್ದರೂ ಕೆಲವು ನಾಯಕರು ಈಗಾಗಲೇ ಹಣ, ಹೆಂಡದ ಆಮಿಷ ನೀಡುತ್ತಿದ್ದಾರೆ. ಅದನ್ನು ಸ್ವೀಕರಿಸುವ ಮಂದಿಗೇನು ಕಡಿಮೆಯಿಲ್ಲಾ. ಚುನಾವಣೆ ಬಂದಾಗ ಕೆಲಸ ಕಾರ್ಯಗಳಿಗೆ ಸುದೀರ್ಘ ರಜೆ ಹಾಕಿ ನಾಯಕರು ನೀಡುವ ಎಂಜಲು ಕಾಸಿಗಾಗಿ ಹೋಗುವವರು ಅನೇಕರಿದ್ದಾರೆ. ಎಲ್ಲದಕ್ಕೂ ಮತದಾರ ಜಾಗೃತನಾಗಿದ್ದು, ತಮ್ಮ ಅಮೂಲ್ಯ ಮತಗಳನ್ನು ಸಾಮಾನ್ಯ ಕಾಸಿಗಾಗಿ ಮಾರಾಟ ಮಾಡದೆ ಉತ್ತಮ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾದ ಘನತರ ಹೊಣೆಗಾರಿಕೆಯಿದೆ. ಇದು ನಮ್ಮ ಹಕ್ಕು ಕೂಡ..ಸಮರ್ಥವಾಗಿ ನಿಭಾಯಿಸಿ..ಏನಂತಿರಾ




ಭಾರತದಲ್ಲಿ ೨ ನೇ ಭಾನುವಾರ-ವಿಶ್ವ ತಾಯಂದಿರ ದಿನ
ಅಜ್ಞಾನದ ಅಂಧಕಾರವನ್ನು ತೊಲಗಿಸಿ-ಸುಜ್ಞಾನದ ಬೆಳಕು ಹರಿಸಲು ಅಮ್ಮ ಎನ್ನುವ ಎರಡಕ್ಷರ ಸಾಕು..
(ಮಾತೃತ್ವದ ಬಲಿಷ್ಟ ಸಂಕೋಲೆಗಳಿಂದ ಬಂದಿಸದೆ, ಹೆಚ್ಚುತ್ತಿರುವ ಬುದ್ಧಿವಿಹೀನ ಮಕ್ಕಳ ತಪ್ಪುಗಳನ್ನು ಎಷ್ಟು ದಿನದವರೆಗೆ ಮಡಿಲಿನಲ್ಲಿಟ್ಟುಕೊಳ್ಳುವಿ ಅಮ್ಮಾ...)

ವಿಶ್ವಮಟ್ಟದಲ್ಲಿ ವಿವಿಧ ಸಂದರ್ಭಗಳಲ್ಲಿ ಸಾಧನೆಗೈದ ವ್ಯಕ್ತಿಗಳನ್ನು ನೆನಪು ಮಾಡಲು ವರ್ಷದಲ್ಲೊಂದು ದಿನ ವಿಶೇಷ ದಿನವನ್ನಾಗಿ ಆಚರಿಸಲಾಗುತ್ತದೆ. ಇಂತಹವುಗಳಲ್ಲಿ ಮಾತೆಯರ ದಿನವೂ ಒಂದಾಗಿದೆ. ಅಮ್ಮ ಎನ್ನುವ ಎರಡಕ್ಷರವೇ ಪವಿತ್ರ ಭಾವನೆಯನ್ನು ಸೃಷ್ಟಿಸುವುದಲ್ಲದೇ ಪೂಜ್ಯತೆಯನ್ನು ಉಂಟು ಮಾಡುತ್ತದೆ. ಇದು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅಜ್ಞಾನದ ಅಂಧಕಾರವನ್ನು ತೊಲಗಿಸಿ, ಸುಜ್ಞಾನದ ಬೆಳಕನ್ನು ಹರಿಸಲು ತಾಯಿ ಎನ್ನುವ ಎರಡಕ್ಷರದ ಮಹಾಮಂತ್ರವೇ ಸಾಕು ಎಂದು ಬಲ್ಲವರು ಹೇಳಿದ್ದಾರೆ. ನವ ಮಾಸ ಪರ್ಯಂತ ತನ್ನ ಉದರದಲ್ಲಿ ಹೊತ್ತು, ಲೋಕದ ಬೆಳಕನ್ನು ಕಾಣುವಂತೆ ಮಾಡಿದ ತಾಯಿಯ ಪ್ರೀತಿ, ವಾತ್ಸಲ್ಯ, ಒಲುಮೆ ಮನುಕುಲದ ಉನ್ನತಿಯ ಚಿಲುಮೆಯಾಗಿರುವುದಷ್ಟೇ ಅಲ್ಲದೆ ಅಸಂಖ್ಯಾತ ಕವಿಗಳ, ಕಲಾವಿದರ, ಮಹಾನ್ ವ್ಯಕ್ತಿಗಳ ಜೀವನದ ಉತ್ಸಾಹದ ಚಿಲುಮೆಯೂ ಆಗಿದೆ. ವಿಶ್ವದ ಅನೇಕ ರಾಷ್ಟ್ರಗಳು ತಮ್ಮ ದೇಶವನ್ನು ಹಾಗೂ ಭಾಷೆಯನ್ನು ತಾಯಿಯೊಂದಿಗೆ ಗುರುತಿಸಿಕೊಳ್ಳುತ್ತಾರೆ. ಭಾರತದ ವೈಶಿಷ್ಟ್ಯವೂ ಕೂಡ ಇದೆ ಆಗಿದೆ. ನದಿ, ಬೆಟ್ಟ, ಪರ್ವತ, ನಿಸರ್ಗವನ್ನೂ ಮಾತೆಯೆಂದೇ ಆರಾಧಿಸಲಾಗುತ್ತದೆ. ಕಠೋರ ವ್ಯಕ್ತಿತ್ವದ ವ್ಯಕ್ತಿಯೂ ಕೂಡ ನೋವಾದಾಗ ಅಮ್ಮಾ ಎಂದು ಉದ್ಗರಿಸುತ್ತಾನೆ. ತಾಯಿಯ ಮಹಿಮೆಯೇ ಅಂತದ್ದು, ಮನುಕುಲದ ಅಭ್ಯುದಯಕ್ಕೆ, ವಿಕಾಸಕ್ಕೆ ಕಾರಣೀಕರ್ತಳಾದ ಅಮ್ಮನ ನೆನಪು ಮಾಡಲು ಈ ದಿನವನ್ನು ಆಚರಿಸಲಾಗುತ್ತದೆ. ವರ್ಷಕ್ಕೊಮ್ಮೆ ಮಾತ್ರ ತಾಯಿಯ ದಿನವನ್ನು ಆಚರಿಸಿದರೆ ಸಾಕೆ ಎನ್ನುವ ಪ್ರಶ್ನೆ ಹುಟ್ಟಿಕೊಳ್ಳಬಹುದು. ಖಂಡಿತಾ ಒಂದು ದಿನ ಮಾತ್ರವಲ್ಲ. ಹುಟ್ಟಿಸಿದ ತಾಯಿಯ ನೆನಪು ಕ್ಷಣ-ಕ್ಷಣವೂ ಮನದಲ್ಲಿ ಅನುರಣನೀಯವಾಗಿರಬೇಕು. ಆದರೆ ಕಾರ್ಮಿಕ ದಿನ, ಮಕ್ಕಳ ದಿನ, ಮಹಿಳಾ ದಿನಗಳನ್ನು ಆಚರಿಸುವಂತೆ ತಾಯಂದಿರ ದಿನದ ಆಚರಣೆಗೂ ಒಂದು ಐತಿಹ್ಯವಿದೆ.
ತಾಯಂದಿರ ದಿನದ ವೈಶಿಷ್ಟ್ಯವೇ ಅಂತಹದು. ವಿಶ್ವದ ೪೬ ರಾಷ್ಟ್ರಗಳಲ್ಲಿ ವಿಶೇಷವಾಗಿ ಈ ದಿನವನ್ನು ಆಚರಿಸಲಾಯಿತಾದರೂ, ಒಂದೇ ದಿನದಂದು ಆಚರಿಸುವುದಿಲ್ಲ. ಆಸ್ಟ್ರೇಲಿಯ, ಬಾಂಗ್ಲಾ, ಬೆಲ್ಜಿಯಂ, ಟರ್ಕಿ, ಕೆನಡ, ಅಮೆರಿಕ, ನ್ಯೂಜಿಲೆಂಡ್, ಕ್ಯೂಬಾ, ಡೆನ್ಮಾರ್ಕ್, ಇಟಲಿ, ಜರ್ಮನಿ, ಜಪಾನ್ ಮತ್ತು ಭಾರತದಲ್ಲಿ ಮೇ ತಿಂಗಳ ಎರಡನೆ ಭಾನುವಾರ ಆಚರಿಸಲಾಗುತ್ತದೆ. ಆಫ್ಘಾನಿಸ್ತಾನ, ವಿಯಟ್ನಾಮ್, ಅಲ್ಜೀರಿಯಾದಲ್ಲಿ ಮಾಚ್ ೮ ರಂದು, ಹಂಗೇರಿ, ಸ್ಪೇನ್, ದಕ್ಷಿಣ ಕೊರಿಯಾದಲ್ಲಿ ಮೇ ತಿಂಗಳ ಮೊದಲ ಭಾನುವಾರದಂದು ಆಚರಿಸಲಾಗುತ್ತದೆ.
ಚಾರಿತ್ರಿಕ ಹಿನ್ನೆಲೆ:
೧೮೭೭ರ ಮೇ ೧೧ರ ಭಾನುವಾರದಂದು ಅಮೆರಿಕದ ಮೆಥೋಡಿಸ್ಟ್ ಎಪಿಸ್ಕೋಪಲ್ ಚರ್ಚಿನ ಪಾದ್ರಿಗಳು ತಮ್ಮ ಮಗ ಮಾಡಿದ ತಪ್ಪಿಗೆ ನೊಂದು ಪ್ರಾರ್ಥನೆಯ ಸಮಯದಲ್ಲೇ ಧರ್ಮಪೀಠ ತ್ಯಜಿಸಿ ಹೊರನಡೆದಾಗ ಅಲ್ಲಿಯೇ ಇದ್ದ ಜೂಲಿಯಟ್ ಬ್ಲಾಕ್ಲಿ ಎನ್ನುವ ಮಹಿಳೆ ಪೀಠಾರೋಹಣ ಮಾಡಿ, ಉಳಿದ ಆಚರಣೆಗಳನ್ನು ಪೂರ್ಣಗೊಳಿಸಿರುವುದು ಮಾತ್ರವಲ್ಲದೇ ಅಲ್ಲಿ ನೆರೆದಿದ್ದ ಎಲ್ಲಾ ತಾಯಂದಿರನ್ನೂ ತನ್ನೊಡನೆ ಸೇರಲು ಪ್ರೋತ್ಸಾಹಿಸುತ್ತಾಳೆ. ತಮ್ಮ ತಾಯಿಯ ಈ ಕ್ರಮ ನೋಡಿ ಸಂತೃಪ್ತರಾದ ಆಕೆಯ ಇಬ್ಬರು ಮಕ್ಕಳು ಪ್ರತಿ ವರ್ಷವೂ ತಾಯಿಯ ಹುಟ್ಟುಹಬ್ಬದಂದು ತಮ್ಮ ಸ್ವಂತ ಸ್ಥಳಕ್ಕೆ ಹೋಗಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿ ಬರುವ ಸಂಪ್ರದಾಯ ಪ್ರಾರಂಭಿಸುತ್ತಾರೆ. ಈ ರೀತಿಯಾಗಿ ಪ್ರತಿ ಮೇ ತಿಂಗಳ ಎರಡನೆ ಭಾನುವಾರದಂದು ತಾಯಂದಿರಿಗೆ ಶ್ರದ್ಧಾಂಜಲಿ ಅರ್ಪಿಸುವಂತೆ ಊರಿನ ಹಿರಿಯರಿಗೆ, ಅಧಿಕಾರಿಗಳಿಗೆ, ವ್ಯಾಪಾರಿಗಳಿಗೆ ಉತ್ತೇಜನ ನೀಡುತ್ತಾರೆ. ೧೯ನೇ ಶತಮಾನದ ಉಪಾಂತ್ಯದಲ್ಲಿ ಈ ಪರಂಪರೆ ಅಮೇರಿಕದ ಅನೇಕ ನಗರಗಳಿಗೆ ಹರಡುವುದರೊಂದಿಗೆ ಮೆಥೋಡಿಸ್ಟ್ ಎಪಿಸ್ಕೋಪಲ್ ಚರ್ಚ್ ಸಹ ಈ ಸಂಪ್ರದಾಯ ಆಚರಿಸಲು ಪ್ರಾರಂಬಿಸುತ್ತದೆ.
ಅಮೇರಿಕದ ಅಂತರ್ಯುದ್ಧದ ಸಂದರ್ಭದಲ್ಲಿ ಜನತೆಗೆ ಶಾಂತಿ ಮಾರ್ಗ ಬೋಧಿಸುವ ನಿಟ್ಟಿನಲ್ಲಿ  ಅನ್ ಮೇರಿ ರೀವ್ಸ್ ತಾಯಂದಿರ ಸ್ನೇಹದಿನ ಆಚರಿಸುವ ಸಂಪ್ರದಾಯವನ್ನು ಆರಂಭಿಸುತ್ತಾರೆ. ಇದೇ ಪರಂಪರೆ ಮುಂದುವರಿಸಿದ ಆಕೆಯ ಪುತ್ರಿ ಅನ್ನಾ ಜಾರ್ವಿಸ್ ಈ ಆಚರಣೆಯನ್ನು ಪ್ರತಿ ವರ್ಷವೂ ಮುಂದುವರಿಸುತ್ತಾರೆ. ೧೯೦೭ ರಲ್ಲಿ ಜಾರ್ವಿಸ್ ತನ್ನ ತಾಯಿಯ ಎರಡನೆಯ ಪುಣ್ಯ ತಿಥಿ ಆಚರಿಸುವ ವೇಳೆ ಗ್ರಾಫ್ಟನ್ ಚರ್ಚಿನ ಪಾದ್ರಿಗಳನ್ನೂ ಅದರಲ್ಲಿ ಪಾಲ್ಗೊಳ್ಳಲು ಒತ್ತಾಯಿಸುತ್ತಾಳೆ. ತದನಂತರ ತನ್ನ ಸಂಘಟನೆಯ ಮೂಲಕ ಜಾರ್ವಿಸ್ ಸಮಾಜದ ಎಲ್ಲ ಗಣ್ಯ ವ್ಯಕ್ತಿ, ಸಂಘಟನೆಗಳಿಗೂ ಪತ್ರ ಬರೆಯುವ ಮೂಲಕ ತಾಯಂದಿರ ದಿನವನ್ನು ಪ್ರತಿವರ್ಷ ಆಚರಿಸುವಂತೆ ಪ್ರೇರೇಪಿಸುತ್ತಾಳೆ. ಜಾರ್ವಿಸ್‌ಳ ಈ ಪ್ರಯತ್ನದಿಂದ ೧೯೧೧ರ ವೇಳೆಗೆ ಅಮೆರಿಕದ ಎಲ್ಲ ಪ್ರಾಂತ್ಯಗಳಲ್ಲಿಯೂ ಕೂಡ ತಾಯಂದಿರ ದಿನದ ಆಚರಣೆಯ ಸಂಪ್ರದಾಯ ಬೇರೂರುತ್ತದೆ. ಇತನ್ಮಧ್ಯೆ ಜ್ಯೂಲಿಯಾ ವಾರ್ಡ್ ಹೋವ್ ಎಂಬ ಲೇಖಕಿ ಬೋಸ್ಟನ್ ನಗರದಲ್ಲಿ ತಾಯಂದಿರ ದಿನವನ್ನು ಶಾಂತಿಗಾಗಿ ಆಚರಿಸುವುದರ ಮೂಲಕ ಅಲ್ಲಿನ ಸರ್ಕಾರದ ಮೇಲೆ ಒತ್ತಡ ಹೇರಿದ್ದರಿಂದ ೧೯೧೪ರಲ್ಲಿ ವುಡ್ರೋ ವಿಲ್ಸನ್ ಸರ್ಕಾರ ಈ ದಿನದಂದು ರಾಷ್ಟ್ರೀಯ ರಜಾ ದಿನವೆಂದು ಘೋಷಿಸುತ್ತದೆ. ೨೦ ನೆಯ ಶತಮಾನದ ಮಹಿಳಾ ಚಳುವಳಿಗಳ ಪೈಕಿ ಅನ್ನಾ ಜಾರ್ವಿಸ್ ನಡೆಸಿದ ಹೋರಾಟಗಳು ನಿರ್ಲಕ್ಷ್ಯಕ್ಕೊಳಗಾದರೂ, ಆಕೆ ೧೯೦೮ ರ ಮೇ ೧೦ರಂದು ತನ್ನ ತಾಯಿ ಮೇರಿ ರೀವ್ಸ್ ಅವರ ನೆನಪಿನ ಸ್ಮಾರಕ ನಿರ್ಮಿಸಿದ್ದರು.
ಯಾರೀಕೆ ಮೇರಿ ರೀವ್ಸ್:
ಅನ್ ಮೇರಿ ರೀವ್ಸ್ ೧೮೪೩ ರಲ್ಲಿ ಮೆಥೋಡಿಸ್ಟ್ ಮಂತ್ರಿಯಾಗಿದ್ದ ತನ್ನ ತಂದೆ ಜೋಸಯ್ಯ ರಿವ್ಸ್‌ರೊಡನೆ ವರ್ಜಿನಿಯಾಗೆ ಬಂದು ನೆಲೆಸಿದಾಗ ಆಕೆಗೆ ಹನ್ನೆರಡರ ಪ್ರಾಯ. ೧೮೫೦ರಲ್ಲಿ ಗ್ರಾನ್‌ವಿಲೆ ಜಾರ್ವಿಸ್‌ರನ್ನು ವಿವಾಹವಾದ ಮೇರಿಗೆ ಹನ್ನೊಂದು ಮಕ್ಕಳಾದರೂ, ದುರದೃಷ್ಟದಿಂದ ಬದುಕುಳಿದದ್ದು ಕೇವಲ ನಾಲ್ವರು. ಅನ್ ಮೇರಿ ವಾಸಿಸುತ್ತಿದ್ದ ವೆಬ್‌ಸ್ಟರ್ ಪ್ರದೇಶದಲ್ಲಿ ನೈರ್ಮಲ್ಯದ ಅಭಾವದಿಂದ ರೋಗರುಜಿನಗಳು ಕಾಡುತ್ತಿದ್ದು, ಆಕೆಯ ಮಕ್ಕಳೂ ಬಲಿಯಾಗಿದ್ದರು. ಆದರೂ ಧೃತಿಗೆಡದೆ ಮಕ್ಕಳನ್ನು ಸಾಕಿದ ಮೇರಿ ಜನರಲ್ಲಿ ಶುಚಿತ್ವದ ಬಗ್ಗೆ ಅರಿವು ಮೂಡಿಸಲು ಸೋದರ ಜೇಮ್ಸ್ ಎಡ್ವರ್ಡ್ ರೀವ್ಸ್‌ನ ಸಹಾಯ ಪಡೆಯುತ್ತಿದ್ದಳು. ವೃತ್ತಿಯಲ್ಲಿ ವೈದ್ಯರಾಗಿದ್ದ ಜೇಮ್ಸ್ ಮೇರಿ ಸ್ಥಾಪಿಸಿದ್ದ ಮಹಿಳಾ ಕ್ಲಬ್‌ಗಳಿಗೆ ಭೇಟಿ ನೀಡಿ ಉಪನ್ಯಾಸಗಳನ್ನು ನೀಡುತ್ತಿದ್ದರು. ಕ್ಷಯರೋಗದಿಂದ ಬಳಲುತ್ತಿದ್ದ ತಾಯಂದಿರ ಆರೈಕೆಗಾಗಿ ಮಹಿಳಾ ಕ್ಲಬ್‌ನ ಸದಸ್ಯರು ಮನೆಗಳಿಗೆ ಭೇಟಿ ನೀಡುತ್ತಿದ್ದರು. ಈ ಎಲ್ಲಾ ಸೇವೆಗಳ ಹಿಂದೆ ಅನ್ ಮೇರಿಯ ಉದಾತ್ತ ಸೇವಾ ಮನೋಭಾವ ಪ್ರೇರಕ ಶಕ್ತಿಯಾಗಿತ್ತು.

ಅಮೇರಿಕದ ಅಂತರಿಕ ಯುದ್ಧ ಉಚ್ಚ್ರಾಯ ಸ್ಥಿತಿ ತಲುಪಿದ್ದ ಹಂತದಲ್ಲಿ, ೧೮೬೧ ರಲ್ಲಿ, ವೆಬ್‌ಸ್ಟರ್ ಮತ್ತು ಟೇಲರ್ ಗ್ರಾಮಗಳು ಬಹುತೇಕ ಸೇನಾ ನೆಲೆಗಳಾಗಿದ್ದವು. ಯುದ್ಧ ನಿರತರಾಗಿದ್ದ ಎರಡೂ ಬಣಗಳು ಈ ಪ್ರದೇಶದಲ್ಲಿ ಬೀಡು ಬಿಟ್ಟಿದ್ದವು. ಇದರಿಂದ ತನ್ನ ಕ್ಲಬ್‌ಗಳಿಗೆ ಸಮಸ್ಯೆಯಾಗಬಹುದೆಂದು ಭಾವಿಸಿದ ಮೇರಿ ಕೂಡಲೇ ತುರ್ತು ಸಭೆ ಕರೆದು ಎಂತಹ ವಿಷಮ ಪರಿಸ್ಥಿತಿ ಎದುರಾದರೂ ಕ್ಲಬ್ ಸದಸ್ಯರು ಪರಸ್ಪರ ಸ್ನೇಹ ಮರೆಯದೆ, ಯುದ್ಧ ನಡೆಯುವ ಸಂದರ್ಭವಾಗಲಿ, ಮುಗಿದ ತದನಂತರ ಚರ್ಚುಗಳ ವಿಭಜನೆಯಾಗದಂತೆ ಎಚ್ಚರ ವಹಿಸಬೇಕು ಎನ್ನುವ ವಾಗ್ದಾನವನ್ನು ಎಲ್ಲರಿಂದಲೂ ಪಡೆದುಕೊಂಡ ದಿಟ್ಟ ಮಹಿಳೆ. ಯುದ್ಧದ ಸಮಯದಲ್ಲಿ ಸೈನಿಕರು ಟೈಫಾಯ್ಡ್ ಮತ್ತು ದಡಾರ ರೋಗಗಳಿಗೆ ತುತ್ತಾದಾಗ ಸೇನಾ ಪಡೆಗಳು ಮೇರಿಯ ಕ್ಲಬ್‌ನ ಸಹಾಯ ಯಾಚಿಸಿದರು. ಸಹಾಯಹಸ್ತ ಚಾಚಿದ ಮೇರಿ ಯಾವುದೇ ಕಾರಣಕ್ಕೂ ಸೈನಿಕರು ಕ್ಲಬ್‌ನ ಸದಸ್ಯರನ್ನು ಅವಮಾನಿಸುವುದಾಗಲೀ, ಅನ್ಯ ಸಮುದಾಯಗಳ ವಿರುದ್ಧ ತಾರತಮ್ಯ ತೋರುವುದಾಗಲಿ ಮಾಡಕೂಡದೆಂದು ಷರತ್ತು ವಿಧಿಸಿದ್ದಳು. ಈ ಷರತ್ತಿಗೆ ಸೇನಾಪಡೆ ಒಪ್ಪಿದ ನಂತರವೇ ಸಹಾಯ ಒದಗಿಸಲಾಗಿ, ಕ್ಲಬ್ ಅಪಾರ ಮೆಚ್ಚುಗೆಗೆ ಪಾತ್ರವಾಗಿತ್ತು.
ಅಂತರ್ಯುದ್ಧ ಮುಗಿದ ನಂತರ ಫ್ರುಂಟಿ ಟೌನ್‌ನ ಕೋರ್ಟ್ ಹೌಸ್‌ನಲ್ಲಿ ತಾಯಂದಿರ ದಿನ ಆಚರಿಸುವ ಮೂಲಕ ಮೇರಿ ಎರಡೂ ಸೈನ್ಯಗಳ ಸೈನಿಕರನ್ನು ಮತ್ತು ಕುಟುಂಬದವರನ್ನೂ ಒಂದುಗೂಡಿಸಿ, ಮನರಂಜನಾ ಕಾರ್ಯಕ್ರಮ ಏರ್ಪಡಿಸಿದ್ದರು. ಯುದ್ಧದ ಸಂದರ್ಭದಲ್ಲಿ ವಿರೋಧಿ ಬಣದ ಸೈನಿಕರು ನೀಲಿ ಮತ್ತು ಬೂದು ಬಣ್ಣದ ಉಡುಗೆ ಧರಿಸಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಮೇರಿ ಬೂದು ಬಣ್ಣದ ಉಡುಗೆ ಧರಿಸಿದ್ದರೆ, ಮತ್ತೊರ್ವ ಮಹಿಳೆ ನೀಲಿ ವಸ್ತ್ರ ಧರಿಸಿ, ಸಾಂಕೇತಿಕ ಐಕ್ಯತೆಯನ್ನು ಪ್ರದರ್ಶಿಸಿದ್ದರು. ಭಿನ್ನ ವಸ್ತ್ರಗಳನ್ನು ಧರಿಸಿದ ಇಬ್ಬರು ಮಹಿಳೆಯರು ಪರಸ್ಪರ ಆಲಂಗಿಸಿ, ಹಸ್ತಲಾಘವ ನೀಡುವುದರ ಮೂಲಕ ಮನುಜ ಸಂಬಂಧ ಬೆಸೆಯುವ ಸಂದೇಶವನ್ನೂ ಮೇರಿ ನೀಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರೆಲ್ಲರೂ ಇದೇ ರೀತಿ ಪರಸ್ಪರ ಆಲಂಗಿಸಿಕೊಂಡು ಐಕ್ಯತೆಯನ್ನು ಪ್ರದರ್ಶಿಸಿದ್ದರು. ಅಲ್ಲಿ ನೆರೆದಿದ್ದ ಎರಡೂ ಪಂಗಡಗಳ ಜನ ತಮಗೇ ಅರಿವಿಲ್ಲದಂತೆ ಯುದ್ಧ ಪರಂಪರೆಯನ್ನು ಮರೆತು, ತುಂಬಿದ ಕಂಗಳಿಂದ ಪರಸ್ಪರ ಆಲಂಗಿಸಿಕೊಳ್ಳುವುದರಲ್ಲಿ ನಿರತರಾಗಿದ್ದರು.
ಈ ರೀತಿಯಾಗಿ ತಾಯಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವುದೇ ಅಲ್ಲದೆ ತನ್ಮೂಲಕ ವಿಶ್ವ ಭ್ರಾತೃತ್ವ, ಮಾನವತೆಯನ್ನು ಜಗತ್ತಿಗೆ ಸಾರುವ ಮಹತ್ತರ ಕಾರ್ಯ ಕೈಗೊಂಡ ಅನ್ ಮೇರಿ ರೀವ್ಸ್ ತನ್ನ ೭೨ ನೇ ವಯಸ್ಸಿನಲ್ಲಿ ೧೯೦೫ರಲ್ಲಿ ಇಹಲೋಕ ತ್ಯಜಿಸಿದ್ದರು. ಈ ಮಹಾನ್ ಚೇತನದ ನೆನಪಿನಲ್ಲೇ ಆಕೆಯ ಪುತ್ರಿ ಅನ್ನಾ ಜಾರ್ವಿಸ್ ಪ್ರತಿವರ್ಷವೂ ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೆ ತಾಯಂದಿರ ದಿನವನ್ನು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಆಚರಿಸುವ ನಿಟ್ಟಿನಲ್ಲೂ ಸಾಕಷ್ಟು ಶ್ರಮ ವಹಿಸಿದ್ದರು. ಇಂದಿಗೂ ಫಿಲಾಡೆಲ್ಫಿಯಾದಲ್ಲಿರುವ ಅನ್ ಮೇರಿ ರೀವ್ಸ್ ಅವರ ಸಮಾಧಿಗೆ ತಾಯಂದಿರ ದಿನದಂದು ತಂಡೋಪತಂಡವಾಗಿ ತೆರಳಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗುತ್ತದೆ.
ತಾಯಂದಿರ ದಿನದ ಸಾರ್ಥಕತೆ:
ಪುರಾತತ್ವ ಮಹತ್ತರ ಅಂಶಗಳಿಂದ ವಿಶ್ವಕ್ಕೆ ಮಾದರಿಯಾಗಿದ್ದ ಭಾರತದಲ್ಲಿಂದು ಆಧುನಿಕತೆಯ ಸೋಗಿನಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳಿಂದ ತಲೆತಗ್ಗಿಸುವಂತಾಗಿರುವುದು ಸತ್ಯ. ಇವುಗಳ ಪೈಕಿ ವೃದ್ಧಾಪ್ಯದಲ್ಲಿನ ಸಮಸ್ಯೆಯೂ ಒಂದಾಗಿದೆ. ಒಂದೆಡೆ ನಾಗರಿಕ ಸಮಾಜ ಹೆಚ್ಚು ಸುಶಿಕ್ಷಿತವಾಗುತ್ತಿರುವಂತೆಲ್ಲಾ ಹೆತ್ತವರನ್ನು ನಿರ್ಲಕ್ಷಿಸುವ ಪ್ರವೃತ್ತಿಯೂ ಹೆಚ್ಚಾಗುತ್ತಿರುವುದು ವಿಷಾದನೀಯ. ದೇಶದಲ್ಲಿಂದು ಅನಾಥಾಶ್ರಮಗಳಿಗಿಂತ ಹೆಚ್ಚು ವೃದ್ಧಾಶ್ರಮಗಳಿವೆ. ಡಾಲರ್‌ಗಳ ಬೆನ್ನಟ್ಟಿ ವಿದೇಶದಲ್ಲಿ ನೆಲೆಸುವ ಪುತ್ರ ರತ್ನರು ತಮ್ಮ ವೃದ್ಧ ಪೋಷಕರನ್ನು ವೃದ್ಧಾಶ್ರಮಕ್ಕೆ ವಹಿಸುವ ಪರಂಪರೆ ಒಂದೆಡೆಯಾದರೆ, ಮತ್ತೊಂದೆಡೆ ಇಲ್ಲಿಯೇ ನೆಲೆಸಿದ್ದರೂ ಕೌಟುಂಬಿಕ ಸಾಮರಸ್ಯ ನಿರ್ವಹಿಸಲಾಗದೆ ಹೆತ್ತವರನ್ನು ನಿರ್ಲಕ್ಷಿಸುವ ಪರಂಪರೆ ಸದ್ದಿಲ್ಲದೆ ಬೆಳೆಯುತ್ತಿದೆ. ಮಧ್ಯಮ ವರ್ಗಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಈ ಪ್ರವೃತ್ತಿಗೆ ಹಲವಾರು ಸಾಮಾಜಿಕ ಆರ್ಥಿಕ ಮತ್ತು ಸಾಂಸ್ಕೃತಿಕ ಕಾರಣಗಳಿವೆ. ಜಾಗತೀಕರಣದ ಪರಿಣಾಮವಾಗಿ ಯುವ ಜನಾಂಗದಲ್ಲಿ ಕಂಡುಬರುತ್ತಿರುವ ಧನದಾಹಿ ಮನೋಭಾವ, ಐಷಾರಾಮಿ ಜೀವನದ ಕನಸು, ಪೀಳಿಗೆಯ ಅಂತರದ ನೆಪದಲ್ಲಿ ಹಿರಿಯರ ಮನೋಭಾವ ಗ್ರಹಿಸಲಾಗದ ಯುವಕರ ಅಹಮಿಕೆ, ಕೌಟುಂಬಿಕ ಸಮಸ್ಯೆಗಳನ್ನು ಎದುರಿಸಲು ಬೇಕಾದ ತಾಳ್ಮೆಯ ಕೊರತೆ ಇವೆಲ್ಲವೂ ಕೂಡ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ.
ಹೆತ್ತವರಿಗೆ ವೃದ್ಧಾಪ್ಯದಲ್ಲಿ ಒಂದು ನೆಮ್ಮದಿಯ ತಾಣದೊಂದಿಗೆ ಆರೋಗ್ಯಕರ ಸನ್ನಿವೇಶ ಒದಗಿಸುವುದು ಮಕ್ಕಳ ಕರ್ತವ್ಯ ಎನ್ನುವ ಭಾವನೆ ಕ್ಷೀಣಿಸುತ್ತಿದ್ದು, ಕೌಟುಂಬಿಕ ಸಂಬಂಧಗಳು ವ್ಯಾವಹಾರಿಕತೆಯ ಸೋಗಿನಲ್ಲಿ ಬಿಂಬಿತವಾಗುತ್ತಿದೆ. ಹಣಬಲವಿದ್ದು, ತಂದೆ ತಾಯಿಯನ್ನು ದೂರದ ಬಡಾವಣೆಗಳ ಐಷಾರಾಮಿ ಅಪಾರ್ಟುಮೆಂಟುಗಳಲ್ಲಿ ಪ್ರತ್ಯೇಕವಾಗಿರಿಸುವುದೂ ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ನಮ್ಮ ತಂದೆ ತಾಯಿಗೇನೂ ತೊಂದರೆ ಇಲ್ಲ, ಆಗಾಗ್ಗೆ ಹೋಗಿ ನೋಡಿಬರುತ್ತೇವೆ, ಅವರಿಗೆ ಬೇಕಾದ್ದನ್ನೆಲ್ಲಾ ಒದಗಿಸುತ್ತೇವೆ ಎಂದು ಹೇಳುವುದೂ ಒಂದು ಗೌರವದ ಸಂಕೇತವೆನ್ನುವ ಹುಚ್ಚು ತಿಳುವಳಿಕೆ ಹೆಚ್ಚುತ್ತಿದೆ. ಇದಕ್ಕಿಂತಲೂ ಭಿನ್ನವಾದುದು ಮಕ್ಕಳು ಕೆಲವು ಸಂದರ್ಭಗಳಲ್ಲಿ ಹೆತ್ತವರನ್ನು ಅತ್ಯುತ್ತಮ ಸೌಲಭ್ಯಗಳಿರುವ ವೃದ್ಧಾಶ್ರಮದಲ್ಲಿ ಸೇರಿಸಿರುವುದನ್ನು ಮಕ್ಕಳು ಹೆಮ್ಮೆಯಿಂದ ಹೇಳಿಕೊಳ್ಳುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಎಷ್ಟೇ ಸೌಲಭ್ಯಗಳಿಂದ ಕೂಡಿದ್ದು,ಚಿನ್ನದ ಸುಪ್ಪತ್ತಿಗೆಯಲ್ಲಿ ಕೂರಿಸಿ,  ಹವಾ ನಿಯಂತ್ರಿತ ಕೊಠಡಿಗಳಿದ್ದರೂ, ಹೆತ್ತವರಿಗೆ ಅತ್ಯಮೂಲ್ಯವಾಗಿ ಬೇಕಾಗಿರುವ ಪ್ರೀತಿ-ವಾತ್ಸಲ್ಯ. ವೃದ್ಧಾಪ್ಯದಲ್ಲಿ ಅಗತ್ಯವಾದ ಸಾಂತ್ವನ, ಮಕ್ಕಳ ಪ್ರೀತಿ ವಾತ್ಸಲ್ಯ, ಕೌಟುಂಬಿಕ ಪರಿಸರ, ಮೊಮ್ಮಕ್ಕಳ ಒಡನಾಟ ಇವೆಲ್ಲದರಿಂದಲೂ ವಂಚಿತರಾಗುವ ಹಿರಿಯರ ಬೇಗುದಿ ಇಂದಿನ ಯುವ ಪೀಳಿಗೆಗೆ ಅರಿವಾಗುತ್ತಿಲ್ಲ.
ಭಾರತೀಯ ಸಂಸ್ಕೃತಿಯ ಕುರಿತು ಪುಂಖಾನುಪುಂಖವಾಗಿ ಉಪನ್ಯಾಸ ನೀಡುವ ಸಾಂಸ್ಕೃತಿಕ ರಾಯಭಾರಿಗಳ ದೃಷ್ಟಿಯಲ್ಲಿ ಮಾತೆ ಪರಮ ಪೂಜನೀಯಳು. ನದಿ, ಬೆಟ್ಟ, ಪರ್ವತ, ಅರಣ್ಯ, ಭೂಮಿ ಎಲ್ಲವೂ ಮಾತೃ ಸಮಾನವೆಂದೇ ಪರಿಗಣಿಸಲಾಗುತ್ತದೆ. ಸಮಸ್ತ ಹಿಂದೂಗಳಿಗೆ ಗಂಗೆ, ಕನ್ನಡಿಗರಿಗೆ ಕಾವೇರಿ, ಭಾರತೀಯರಿಗೆ ಭಾರತ ಮಾತೆ, ಕರ್ನಾಟಕದ ಜನತೆಗೆ ಭುವನೇಶ್ವರಿ, ಎಲ್ಲವೂ ಪೂಜ್ಯವೇ. ಆದರೆ ಈ ಮಾತೃ ಸ್ವರೂಪ ನೈಸರ್ಗಿಕ ಸಂಪತ್ತಿಗೆ ನಾಗರಿಕ ಸಮಾಜ ಸಲ್ಲಿಸುತ್ತಿರುವ ಸೇವೆಯಾದರೂ ಎಂತಹುದು? ಭಾವನೆಗಳ ನೆಲೆಗಟ್ಟಿನಲ್ಲಿ ಈ ಪೂಜ್ಯ ಭಾವನೆ ವಿನಾಶಕಾರಿ ಸ್ವರೂಪ ತಾಳುವುದನ್ನೂ, ಮಾತೃ ಭಕ್ತಿ ಪರಾಕಾಷ್ಠೆ ತಲುಪಿದಾಗ ಭ್ರಾತೃಘಾತುಕ ಲಕ್ಷಣಗಳು ಹೊರ ಹೊಮ್ಮುವುದನ್ನೂ ಇತಿಹಾಸದಲ್ಲಿ ನೋಡಿದ್ದೇವೆ. ಮತ್ತೊಂದೆಡೆ ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆಯುವುದರ ಮೂಲಕ ನದಿಗಳನ್ನು ಕಲುಷಿತಗೊಳಿಸುವ ಮೂಲಕ, ಅರಣ್ಯಗಳನ್ನು ನಾಶಮಾಡುವ ಮೂಲಕ, ಅನ್ನ ನೀಡುವ ಭೂತಾಯಿಯನ್ನು ಉದ್ಯಮಿಗಳಿಗೆ ಒಪ್ಪಿಸಿ, ಅನ್ನದಾತರನ್ನು ಕಡೆಗಣಿಸುವ ಮೂಲಕ ನಮ್ಮ ಮಾತೃ ಭಕ್ತಿಯನ್ನು ಪ್ರದರ್ಶಿಸುತ್ತಿದ್ದೇವೆ. ಮತೀಯ ಭಾವನೆಗಳನ್ನು ಕೆರಳಿಸಿ, ಜಾತಿ ವೈಷಮ್ಯವನ್ನು ಹೆಚ್ಚಿಸಿ, ಧರ್ಮ ಸಂರಕ್ಷಣೆಯ ಹೆಸರಿನಲ್ಲಿ, ಭಾರತ ಮಾತೆಯ ಮಕ್ಕಳ ನಿತ್ಯ ಸಂಹಾರವಾಗುತ್ತಿದ್ದರೂ ದಿವ್ಯಮೌನ ವಹಿಸಿದ್ದೇವೆ.
ತಾಯಂದಿರ ದಿನಾಚರಣೆ ಎಂದರೆ ಹೆತ್ತ ತಾಯಂದಿರನ್ನು ನೆನೆಯುವುದಷ್ಟೇ ಅಲ್ಲ, ಮನುಕುಲವನ್ನು ಪೊರೆವ ಮಾತೃ ಸಮಾನ ಪರಿಸರವನ್ನು ರಕ್ಷಿಸುವುದೂ ನಮ್ಮ ಕರ್ತವ್ಯವೆಂದು ನಾಗರಿಕ ಸಮಾಜ ಭಾವಿಸಬೇಕಿದೆ. ಆಧುನಿಕ ಜಗತ್ತಿನಲ್ಲಿ ಕೌಟುಂಬಿಕ ಮೌಲ್ಯಗಳು ನಶಿಸಿಹೋಗುತ್ತಿರುವ ಸಂದರ್ಭದಲ್ಲಿ ಯುವ ಪೀಳಿಗೆಗೆ ಒಂದು ಆದರ್ಶಪ್ರಾಯ ಮಾರ್ಗದರ್ಶನ ಇಲ್ಲದಿರುವುದು ಸ್ಪಷ್ಟ. ಸಂಸ್ಕೃತಿ, ಕಲೆ, ರಾಜಕೀಯ, ಶಿಕ್ಷಣ, ಸಾಹಿತ್ಯ, ಆಧ್ಯಾತ್ಮ ಎಲ್ಲ ಕ್ಷೇತ್ರಗಳಲ್ಲೂ ಸಂವೇದನೆ ಮಾಯವಾಗುತ್ತಿದ್ದು ವಾಣಿಜ್ಯೀಕರಣ ತಲೆದೋರುತ್ತಿದೆ. ಕೌಟುಂಬಿಕ ಕ್ಷೇತ್ರವೂ ಇದರ ಪ್ರಭಾವದಿಂದ ಹೊರತಾಗಿಲ್ಲ. ಆಸ್ತಿ-ಹಣದ ವ್ಯಾಮೋಹದಿಂದ ಹೆತ್ತವರನ್ನು ಹಾಗೂ ಬಂಧುಗಳನ್ನೇ ಕೊಲೆಮಾಡುವ ದುರ್ದರ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಒಂದು ಆದರ್ಶಪ್ರಾಯ ತಳಹದಿ ಒದಗಿಸುವಲ್ಲಿ ನಮ್ಮ ಆಧುನಿಕ ಶಿಕ್ಷಣ ವ್ಯವಸ್ಥೆ ವಿಫಲವಾಗಿದೆ ಎನ್ನುವುದು ಸತ್ಯ. ಪಠ್ಯ ಪುಸ್ತಕಗಳಲ್ಲಿ ಲಭ್ಯವಿರುವ ಪಾಠಗಳನ್ನು ಮೀರಿ ಮಕ್ಕಳಿಗೆ ನೀತಿ ಮಾರ್ಗ ತೋರಿಸುವ ಶಿಕ್ಷಕ ಪರಂಪರೆ ಬಹುತೇಕ ನಶಿಸಿಹೋಗಿದ್ದು, ವಿದ್ಯಾರ್ಜನೆ ಎನ್ನುವುದು ದುಡಿಮೆಗೆ, ಧನಾರ್ಜನೆಗೆ ಸೋಪಾನ ಎಂದೇ ಪರಿಗಣಿಸಲಾಗುತ್ತಿದೆ.
ಮಧ್ಯಮ ವರ್ಗ ಮತ್ತು ಗ್ರಾಮೀಣ ಭಾಗದಿಂದ ನಗರಗಳಿಗೆ ವಲಸೆ ಬಂದು ನಗರೀಕರಣಕ್ಕೊಳಗಾದ ಜನಸಮುದಾಯದಲ್ಲಿ ಉದ್ಭವಿಸಿರುವ ಅಭದ್ರತೆ ಹೋಗಲಾಡಿಸುವಲ್ಲಿ ಸರ್ಕಾರಗಳು ವಿಫಲವಾಗಿರುವುದರಿಂದ, ಯುವಪೀಳಿಗೆ ಸುಖದ ಬೆನ್ನಟ್ಟಿ ಹೋಗುವುದು ಸ್ವಾಭಾವಿಕ. ಯುವಪೀಳಿಗೆಗೆ ನೈತಿಕ ಮಟ್ಟದಲ್ಲಿ ಒಂದು ಉತ್ತಮ ಸಾಮಾಜಿಕ-ಸಾಂಸ್ಕೃತಿಕ ವೇದಿಕೆ ಒದಗಿಸುವಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ವಿದ್ಯಾರ್ಥಿಗಳಿಗೆ ಅಂಕಗಳಿಕೆಯೇ ಕಣ್ಣ ಮುಂದಿರುವ ಧ್ಯೇಯವಾದರೆ, ಶಿಕ್ಷಕರಿಗೆ ಹಣಗಳಿಕೆ ಧ್ಯೇಯವಾಗಿದೆ. ಮತ್ತೊಂದೆಡೆ ಹೆತ್ತವರಿಗೆ ಮಕ್ಕಳು ಐದಂಕಿಯ ಸಂಬಳ ಗಳಿಸುವುದೇ ಧ್ಯೇಯ. ಈ ಧನಗಾಹಿ ಸಂಸ್ಕೃತಿಯ ಪರಿಣಾಮಕ್ಕೆ ಬಲಿಯಾಗುತ್ತಿರುವವರಲ್ಲಿ ಹೆತ್ತವರೇ ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಯುವ ಪೀಳಿಗೆಯ ಆಶಯಗಳನ್ನು ಗ್ರಹಿಸುವಲ್ಲಿ ಮತ್ತು ಪೀಳಿಗೆಯ ಅಂತರದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹೆತ್ತವರ ವೈಫಲ್ಯವನ್ನೂ ಇಲ್ಲಿ ನಿರ್ಲಕ್ಷಿಸುವಂತಿಲ್ಲ. ಹಾಗಾಗಿ ಪ್ರಸಕ್ತ ಸನ್ನಿವೇಶಕ್ಕೆ, ಹೆತ್ತವರನ್ನು ನಿರ್ಲಕ್ಷಿಸುವ ಪರಂಪರೆಯ ಉಗಮಕ್ಕೆ ನಾಗರಿಕ ಸಮಾಜವೂ ಸೇರಿದಂತೆ, ಇಡೀ ವ್ಯವಸ್ಥೆ ಕಾರಣವಾಗಿದೆ.
ಸಂಸ್ಕೃತಿಯ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಸಂಘಟನೆಗಳು, ಮನುಕುಲದ ಶ್ರೇಷ್ಟ ಪರಂಪರೆಯಾದ ಮಾತೃ ಪ್ರೇಮಕ್ಕೆ ದಕ್ಕೆ ಬಂದಿರುವುದನ್ನು ಗಮನಿಸಿಲ್ಲ. ಮಾತೃ ದೇವೋಭವ ಎಂಬ ಶ್ಲೋಕಗಳು ಮನಸ್ಸಿಗೆ ಆಹ್ಲಾದ ಉಂಟುಮಾಡಬಲ್ಲದೇ ಹೊರತು, ವಾಸ್ತವ ಸನ್ನಿವೇಶಗಳನ್ನು ಬದಲಿಸುವುದಿಲ್ಲ. ಹೆತ್ತವರಿಗೆ ದೈವೀಕ ಸ್ವರೂಪ ನೀಡಿ, ದೇಹವಿಲ್ಲದ ಆತ್ಮಗಳಿಗೆ ತರ್ಪಣ ನೀಡುವ ಸಂಸ್ಕೃತಿಗಿಂತಲೂ, ಜೀವಾತ್ಮವನ್ನು ಹೊತ್ತ ದೇಹಗಳಿಗೆ ಸಾಂತ್ವನ ನೀಡುವ ಸಂಸ್ಕೃತಿಯನ್ನು ಬೆಳೆಸುವುದು ಇಂದಿನ ಅಗತ್ಯತೆಯಾಗಿದೆ. ಅಗೋಚರ, ಅತೀತ ಕಲ್ಪನೆಗಳಿಗೆಲ್ಲಾ ಮಾತೃ ಸ್ವರೂಪವನ್ನು ನೀಡಿ ಪೂಜಿಸುವ ಸಮಾಜದಲ್ಲಿ ಹೆತ್ತ ತಾಯಿಯನ್ನೇ ನಿರ್ಲಕ್ಷಿಸುವ ಪರಂಪರೆ ಸದ್ದಿಲ್ಲದೆ ಬೆಳೆಯುತ್ತಿರುವುದು ಸತ್ಯ. ತಾಯಂದಿರ ದಿನದಂದು ನಾಗರಿಕ ಸಮಾಜದಲ್ಲಿ ಹೊಸ ಪ್ರಜ್ಞೆ ಮೂಡಿದಾಗಲೇ ಈ ದಿನದ ಸಾರ್ಥಕ್ಯವನ್ನು ಪಡೆದುಕೊಳ್ಳಲು ಸಾಧ್ಯ.
ಏನಂತಿರಾ.....