Friday 22 November 2013

ಪ್ರೀತಿ-ಪ್ರೇಮದ ಗುಂಗು-ಮೋಹದ ಮುಸುಕಿನಲ್ಲಿ ಮರೆಯಾಗುತ್ತಿರುವ ತಂದೆ-ತಾಯಿಯ ನೈಜ ಪ್ರೀತಿ

ವೈಜ್ಞಾನಿಕ ಯುಗದಲ್ಲಿ ನಾವಿದ್ದೇವೆ ಎಂದು ಎದೆಯುಬ್ಬಿಸಿ, ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳುತ್ತೇವೆ. ನಮ್ಮ ಕೆಲಸವನ್ನು ಕ್ಷಣ ಮಾತ್ರದಲ್ಲಿ ಮಾಡಿ ಮುಗಿಸುವ ಕಂಪ್ಯೂಟರ್, ರೊಬೋಟ್‌ಗಳು, ವಿಷಯಗಳ ಸಂಗ್ರಹಕ್ಕೆ ಅಂತರ್ಜಾಲ, ಸಂಬಂಧಗಳನ್ನು ಬೆಳೆಸುವ ಸಾಮಾಜಿಕ ಜಾಲತಾಣಗಳಿಂದ ನಮ್ಮತನವೆನ್ನುವುದು ನಮಗೆ ಅರಿವಿಲ್ಲದೇ ಮರೆಯಾಗುತ್ತಿದ್ದರೂ, ಅದರ ಕುರಿತು ಕ್ಯಾರೆ ಎನ್ನದೇ ದಿನ ದೂಡುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಪತ್ರದ ಮೂಲಕ ಸಂಪರ್ಕಿಸಬೇಕಿದ್ದ ಮಾನವೀಯತೆಯ, ಕೌಟುಂಬಿಕ ಸಂಬಂಧಗಳಿಂದು, ಅಂಕಿಗಳನ್ನು ಒತ್ತಿದರೆ ಕ್ಷಣಮಾತ್ರದಲ್ಲಿ ಅವರೊಂದಿಗೆ ಮಾತನಾಡುವ, ದೃಶ್ಯದ ಮೂಲಕವು ಅವರೊಂದಿಗೆ ಹರಟುವ ಸಾಧನಗಳಿಗೇನೂ ಕೊರತೆಯಿಲ್ಲಾ. ಮಾರುಕಟ್ಟೆಗೆ ದಿನನಿತ್ಯ ಹೊಸ ಹೊಸ ಸಾಧನಗಳು ಬರುತ್ತಿದ್ದು, ಮನುಷ್ಯ ಮಾತ್ರ ಅವುಗಳ ಮೊರೆ ಹೋಗಿ ಸ್ವಂತವಾಗಿ ಆಲೋಚಿಸುವ ಬುದ್ದಿ ಕಡಿಮೆಯಾಗುತ್ತಿದೆ ಎನ್ನುವುದಂತು ಸತ್ಯ. ಅದನ್ನು ಅರಿಯುವ ಮೊದಲೇ ಬಾಳಿ ಬದುಕಬೇಕಿದ್ದ ಅನೇಕರು ಸಂಬಂಧಗಳನ್ನು ಕಡಿದುಕೊಂಡಿದ್ದು ಮಾತ್ರವಲ್ಲದೇ ಲೋಕವನ್ನೇ ಬಿಟ್ಟು ಪರಲೋಕ ಸೇರಿದವರು ಅದೆಷ್ಟೋ ಮಂದಿ.
ಮೊಬೈಲ್ ಮೂಲಕ ಹತ್ತಾರು ರೋಮ್ಯಾಂಟಿಕ್ ಮೆಸೇಜ್‌ಗಳು ರವಾನೆಯಾಗಿದ್ದೇ ತಡ ಪ್ರೀತಿ ಪ್ರೇಮದ ಪುರಾಣವೇ ಆರಂಭವಾಗುವ ಈ ದಿನದಲ್ಲಿ ಮುಂದಾಗುವ ಪರಿಣಾಮದ ಪರಿವಿಲ್ಲದೇ ದುಡುಕುವ ಹುಡುಗಾಟದ ಹುಡುಗ-ಹುಡುಗಿಯರು ಏನೇನೋ ಅನಾಹುತ ಅನುಭವಿಸುವುದಿದೆ. ``ಕಾಮಾತುರಾಣಾಂ ನ ಭಯಂ ನ ಲಜ್ಜಾ" ಎನ್ನುವ ಮಾತಿನಂತೆ ಬರೀ ಮೋಹವನ್ನೆ ಪ್ರೀತಿಯೆಂದು ಪರಿಭಾವಿಸುವ ಹುಚ್ಚು ಖೊಡಿ ಮನಸ್ಸಿನ ಬೆನ್ನಿಗೆ ಬಿದ್ದವರು ಮಾಡಬಾರದ್ದನ್ನೆಲ್ಲಾ ಮಾಡಿ, ತಮ್ಮ ಬದುಕನ್ನೇ ನರಕವಾಗಿಸಿಕೊಳ್ಳುತ್ತಾರೆ. ಹಿಂದು ಸಮಾಜದ ಹೆಣ್ಣುಮಕ್ಕಳನ್ನು ಲವ್‌ಜಿಹಾದ್ ಎನ್ನುವ ಹೆಸರಿನಲ್ಲಿ ಪ್ರೀತಿಸಿ ಮದುವೆಯಾಗುವ ಮುಸ್ಲಿಂರು ಒಂದೆಡೆಯಾದರೆ, ಸ್ಲೋ ಪಾಯ್ಸ್‌ನ್‌ನಂತೆ ಮತಾಂತರದೊಂದಿಗೆ ಹಿಂದು ಹೆಣ್ಣುಮಕ್ಕಳನ್ನು ಅಪಹರಿಸುವ ಜಾಲ ಸಕ್ರೀಯವಾಗಿದೆ. ಪ್ರೀತಿಸಿದ ವ್ಯಕ್ತಿಗೆ ಹೆಣ್ಣು ಸಿಗಲಿಲ್ಲವೆಂದ ಮಾತ್ರಕ್ಕೆ ತನ್ನ ಜೀವನವೇ ಅಂತ್ಯವಾಯಿತು ಎಂದು ಹೀನ ಕೃತ್ಯಕ್ಕೂ ಮನಮಾಡುವ ಯುವ ಸಮೂಹ. ಸಮಾಜದಲ್ಲಿ ಅನೇಕ ಘಟನೆಗಳು ನಮ್ಮ ಕಣ್ಣೆದುರಿಗೆ ನಡೆಯುತ್ತಿದ್ದರೂ, ಯಾಕೆ ನಮ್ಮ ಹೆಣ್ಣುಮಕ್ಕಳಿಗೆ ಅರ್ಥವಾಗುವುದಿಲ್ಲ. ಪ್ರೀತಿಸುವ ಕಣ್ಣಿಗೆ ತಂದೆ-ತಾಯಿಯ ಪ್ರೀತಿ ಕಾಣದೇ ಹೋಗುತ್ತದೆಯೇ? ಇಲ್ಲಿನ ಉದಾಹರಣೆಗಳನ್ನು ತಿಳಿದಾಗ ಕೌಟುಂಬಿಕ ಸಂಬಂಧಗಳ ಸೂಕ್ಷ್ಮತೆಯ ಅರಿವು ಎಲ್ಲರಿಗೂ ಅರಿವಾಗುತ್ತದೆ ಎನ್ನುವುದು ನನ್ನ ಭಾವನೆ.
ಬಂಟ ಸಮುದಾಯದ ದಂಪತಿಗೆ ನಾಲ್ವರು ಮಕ್ಕಳಲ್ಲಿ ಬದುಕಿದ್ದು ಆರತಿಗೊರ್ವ ಮಗ (ಚಂದ್ರ), ಕೀರ್ತಿಗೊರ್ವಳು ಮಗಳು ಲತಾ(ಹೆಸರು ಬದಲಿಸಲಾಗಿದೆ). ಇವರ ತಂದೆ ಎಲ್ಲರಂತೆ ಕುಡಿತದ ಹವ್ಯಾಸಕ್ಕೆ ತೊಡಗಿ, ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಕುಡುಕ ಗಂಡನ ಉಪಟಳವಿದ್ದರೂ, ತಾಯಿ ಮಾತ್ರ ಮಕ್ಕಳನ್ನು ಕಷ್ಟ ಪಟ್ಟು ಓದಿಸಿದ್ದರು. ತಾಯಿಯ ಆಸೆಯನ್ನು ಚಂದ್ರ ಹುಸಿಗೊಳಿಸಿಲ್ಲ. ಚೆನ್ನಾಗಿ ಓದಿ ಉದ್ಯೋಗಗಿಟ್ಟಿಸಿಕೊಂಡು ಸಂತೋಷದ ಜೀವನ ನಡೆಸಬೇಕು ಎನ್ನುವ ಆಸೆ ಚಿಗುರೊಡೆದಿದೆಯಷ್ಟೆ. ಲತಾ ಮಾತ್ರ ಅಣ್ಣನಂತೆ ಚೆನ್ನಾಗಿ ಓದು ಮುಗಿಸುವ ಬದಲು ಪ್ರಥಮ ಪಿಯುಸಿಗೆ ಹೋಗುವಾಗಲೇ ಪ್ರೀತಿ ಪ್ರೇಮದ ಸುಳಿಗೆ ಸಿಲುಕಿ, ಅದು ಮನೆಯವರಿಗೆ ವಿಷಯ ತಿಳಿಯುವುದರೊಂದಿಗೆ ಶಿಕ್ಷಣಕ್ಕೆ ತೀಲಾಂಜಲಿಯನ್ನಿಟ್ಟುಕೊಂಡಿದ್ದಳು. ಇಷ್ಟಾದ ಮೇಲೆಯೂ ಕೂಡ ಆಕೆಗೆ ಬುದ್ದಿ ಬರಬೇಕಿತ್ತು. ಆದರೆ ಮನೆಯ ಹತ್ತಿರದ ದೇವಸ್ಥಾನಕ್ಕೆ ಆರೂಢ ಪ್ರಶ್ನೆ ಕೇಳಲು ಕೇರಳದ ಪುದುವಾಳರು ಬಂದಿದ್ದು, ಅವರನ್ನು ಕರೆದುಕೊಂಡು ಬಂದ ಕಾರಿನ ಚಾಲಕ ಕ್ರಿಶ್ಚಿಯನ್ ಸಮುದಾಯದ ಜಾನ್‌ನೊಂದಿಗೆ ಪ್ರೇಮಾಂಕುರವಾಗಿತ್ತು. ಅಲ್ಲಿನ ಇವರಿಬ್ಬರ ಸಂಭಾಷಣೆ ಮುಂದುವರಿದು, ರಿಜಿಸ್ಟರ್ ಮದುವೆಯಲ್ಲಿ ಕೊನೆಗೊಂಡಿತ್ತು. ಆದರೆ ಲತಾಳನ್ನು ಮದುವೆಯಾದವನಿಗೆ ಅದು ಪ್ರಥಮ ಮದುವೆಯಾಗಿರಲಿಲ್ಲ ಎನ್ನುವ ಸತ್ಯ ಲತಾಳಿಗೆ ತಿಳಿಯುವುದರೊಳಗೆ ಕಾಲ ಮಿಂಚಿ ಹೋಗಿದ್ದು, ಆಕೆ ಸಂಪೂರ್ಣ ತವರಿನ ಸಂಬಂಧ ಕಡಿದುಕೊಂಡಿದ್ದಳು. ಕಷ್ಟದ ಜೀವನ ಸಾಗಿಸುತ್ತಿದ್ದ ಲತಾ ಕೊನೆಗೊಂದು ದಿನ ಮನೆಯವರೊಂದಿಗೆ ನನಗಿಲ್ಲಿ ಕಷ್ಟವಾಗುತ್ತಿದೆ ಎಂದು ಹೇಳಿದವಳು ಇತ್ತೀಚಿಗೆ ಹೆಣವಾಗಿ ಮನೆಗೆ ಬಂದಿದ್ದಳು. ಆಕೆ ಆತ್ಮಹತ್ಯೆ ಮಾಡಿಕೊಂಡಳೇ? ಕೊಲೆಯೋ? ಎನ್ನುವುದು ಇನ್ನೂ ಕೂಡ ಪ್ರಶ್ನಾತೀತ.
ಲವ್‌ಜಿಹಾದ್ ಹೆಸರಿನಲ್ಲಿ ಕಟಪಾಡಿಯ ಅಕ್ಷತಾ, ಕಾಸರಗೋಡಿನ ಸ್ವಪ್ನಾ, ಕುಂದಾಪುರದ ಜ್ಯೋತಿ, ಬೆಂಗಳೂರಿನ ಕಾವೇರಿ ಹೀಗೆ ಅನೇಕ ಹೆಸರುಗಳು ಪಟ್ಟಿ ಮಾಡಬಹುದು. ಪ್ರೀತಿ ಮಾಡುತ್ತೇವೆ ಎನ್ನುವ ಇವರ ಪ್ರೀತಿಯಲ್ಲಿ ಮೋಹವೇ ಜಾಸ್ತಿಯಾಗಿ ಅದು ಕಾಮವಾಗಿ ಮಾರ್ಪಟ್ಟಿತ್ತು. ತಮ್ಮ ಹೊಟ್ಟೆ ಬಟ್ಟೆ ಕಟ್ಟಿ ತುತ್ತನ್ನವನ್ನು ಬೇಯಿಸಿ ಹಾಕಿದ ತಂದೆ-ತಾಯಿಯರ ಪ್ರೀತಿ ಅವರ ಕಣ್ಣಿಗೆ ಮಂಕಾಗಿ ಕಾಣುತ್ತದೆ. ಕಷ್ಟಪಟ್ಟು ಸಾಕಿ ಬೆಳೆಸಿದ, ಅನಾರೋಗ್ಯದಲ್ಲಿರುವ ಪೋಷಕರನ್ನು ಲೆಕ್ಕಿಸದೇ ಪ್ರೀತಿಯ ಮೋಹಕ್ಕೆ ಸಿಲುಕಿ ಮನೆಬಿಟ್ಟು ತೆರಳಿದ ಈ ಯುವತಿಯರು ತಮ್ಮ ಕಷ್ಟವನ್ನು ತಾವೇ ತಂದುಕೊಳ್ಳುತ್ತಾರೆ. ಲವ್‌ಜಿಹಾದ್ ಹೆಸರಿನಲ್ಲಿ ಪ್ರೀತಿಯ ಮೋಹಕ್ಕೆ ಸಿಲುಕಿ ಅವರೊಂದಿಗೆ ಹೋಗುವಾಗಲೇ ಆಲೋಚನೆ ಮಾಡಬೇಕು. ಹಿಂದು ಧರ್ಮದಲ್ಲಿದ್ದಂತೆ ಸ್ವಾತಂತ್ರ್ಯ, ಪ್ರೀತಿಸುವಾಗ ಇರುವ ಸ್ವೇಚ್ಛೆ ತಮಗೆ ಮುಂದೆ ಸಿಗುವುದಿಲ್ಲ ಎನ್ನುವ ಯೋಚನೆಯನ್ನೂ ಕೂಡ ಮಾಡುವುದಿಲ್ಲ. ಮದುವೆಯಾದ ದಿನದಿಂದಲೇ ಅವರು ಜೆರ್ಸಿ ದನದಂತೆ ವರ್ಷದಿಂದ ವರ್ಷಕ್ಕೆ ಕರು(ಮಗು)ವನ್ನು ಹಾಕುತ್ತಾ, ಬುರ್ಖಾದ ಮುಸುಕಿನಲ್ಲಿ ಜೀವನ ನಡೆಸುತ್ತಾ, ವರ್ಷವಾಗದಿದ್ದರೂ ಮುದಿಯಾಗಿ ಕಸಾಯಿಖಾನೆಗೆ ಸೇರಬೇಕಾಗುತ್ತದೆ. ಇದನ್ನು ನಮ್ಮ ಹೆಣ್ಣುಮಕ್ಕಳು ಅರಿಯದೇ ತಾವೇ ಹಗಲು ನೋಡಿದ ಬಾವಿಯಲ್ಲಿ ಹೋಗಿ ಬೀಳುತ್ತಾರೆ. ಇದನ್ನೆಲ್ಲಾ ಅರಿಯುವಾಗ ಕಾಲಮೀರಿ ಹೋಗಿರುತ್ತದೆ.
ಸಮಾಜದಲ್ಲಿಂದು ಅನೇಕ ಘಟನೆಗಳು ನಡೆಯುತ್ತಿದೆ. ಪ್ರೀತಿ ಮಾಡುವುದು ತಪ್ಪಲ್ಲ. ಮೊಬೈಲ್ ಪ್ರೀತಿಯಲ್ಲಿ ಸ್ವಾರ್ಥ, ಕಾಮವೇ ಅಧಿಕವಿರುತ್ತದೆ. ಲವ್‌ಜಿಹಾದ್ ಎನ್ನುವ ಹೆಸರಿನಲ್ಲಿ ಮುಸ್ಲಿಂ ಯುವಕರು ಹಿಂದು ಹೆಣ್ಣುಮಕ್ಕಳನ್ನು ತಮ್ಮ ಬಲೆಗೆ ಬೀಸಲು ದಿನದ ೨೪ ಗಂಟೆಗಳೂ ಸಾಮಾಜಿಕ ಜಾಲತಾಣ, ಮೊಬೈಲ್ ಸಿಕ್ಕಿದ ನಂಬರ್‌ಗಳಿಗೆ ಕರೆ, ಸಂದೇಶಗಳನ್ನು ಕಳುಹಿಸುತ್ತಲೇ ಇರುತ್ತಾರೆ. ಎಲ್ಲಿಯಾದರೂ ಹೆಣ್ಣು ತಪ್ಪಿ ಪ್ರತಿಕ್ರಿಯೆ ನೀಡಿದರೆ ಅವಳ ಭವಿಷ್ಯಕ್ಕೆ ಆಕೆಯೇ ಎಳ್ಳುನೀರು ಬಿಟ್ಟಂತಾಗುತ್ತದೆ. ಸಕಾಲದಲ್ಲಿ ಎಚ್ಚೆತ್ತುಕೊಂಡರೆ ಯಾವುದೇ ಅನಾಹುತಗಳು ಸಂಭವಿಸುವುದಿಲ್ಲಎನ್ನುವ ಸತ್ಯವನ್ನು ಕೂಡ ಅರಿಯಬೇಕು.
ಪ್ರೀತಿಯನ್ನು ಪಡೆಯಬೇಕು ಎನ್ನುವ ಹಂಬಲ ಎಲ್ಲರಿಗೂ ಇರುತ್ತದೆ. ಆದರೆ ಹುಚ್ಚು ಪ್ರೀತಿಗೆ ಬಲಿಯಾಗಿ ಪೋಷಕರನ್ನು ತೊರೆಯುವ ಮಕ್ಕಳಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ನಿರೀಕ್ಷಿಸಲು ಸಾಧ್ಯವೇ? ಪೋಷಕರು ನೋಡಿದ ಗಂಡು-ಹೆಣ್ಣನ್ನು ಮದುವೆ ಮಾಡಿಕೊಂಡಾಗ ಸಂತೋಷದ ಜೀವನ ಸಾಗಿಸಬಹುದಾಗಿದ್ದರೂ, ಎಲ್ಲಿಯೋ ಒಂದು ಕಡೆ ನಾವು ಎಡವುತ್ತಿರುವುದಂತು ಸತ್ಯ.
ಅದಕ್ಕಿಂತಲೂ ಹೊರತಾಗಿರುವ ವಿಚಿತ್ರತೆಯ ಮನೋಭಾವ ಪ್ರೀತಿಸುವ ಮನಸ್ಸುಗಳಲ್ಲಿ ಮೂಡುತ್ತಿರುವುದು ಆಘಾತಕಾರಿ ಬೆಳವಣಿಗೆಯೇ ಸರಿ. ಪ್ರೀತಿ ಸಹಜವಾದುದೇ? ಆದರೆ ಇದೇ ಪ್ರೀತಿ ಹಲವು ರೀತಿಯ ಗೊಂದಲಗಳಿಗೆ ಎಡೆಮಾಡುತ್ತದೆ. ಎರಿಕ್ ಫ಼್ರಾಮ್ ಎನ್ನುವ ಸಮಾಜಶಾಸ್ತ್ರಜ್ಞ ಹೇಳುವ ಹಾಗೆ ನಿಜವಾದ ಪ್ರೀತಿಯಲ್ಲಿ ಕೊಡುವ ಗುಣವಿದೆಯೇ ಹೊರತು ಕಸಿಯುವ, ಕಿತ್ತುಕೊಳ್ಳುವ, ವಿರೂಪಗೊಳಿಸುವ ಭಂಜನೆಯ ಗುಣವಿರುವುದಿಲ್ಲ. ಪೊಸ್ಸೆಸ್ಸಿವ್ ಗುಣ ಒಂದು ಹಂತದವರೆಗೆ ಓಕೆ. ಆದರೆ ಅದು ಅತಿರೇಕಕ್ಕೆ ತಿರುಗಿ ಏನೇ ಆಗಲಿ ಅವಳು ನನಗೆ ಬೇಕೆ ಬೇಕು, ಪಡೆದೆ ತೀರುತ್ತೇನೆ ಎನ್ನುವ ಹಠ ಪ್ರಯೋಗದ ನಡುವೆ ಅವಳು ಒಂದೊಮ್ಮೆ ಒನ್‌ವೇ ಪ್ರೀತಿ ನಿರಾಕರಿಸಿದ್ದೆಯಾದರೆ ಈತ ಇದ್ದಕ್ಕಿದ್ದಂತೆ ಸೈತಾನ ರೂಪ ತಾಳುತ್ತಾನೆ. ಅಷ್ಟರವರೆಗೆ ಚಿನ್ನ, ರನ್ನ ಎಂದು ಕೊಂಡಾಡಿದ ವ್ಯಕ್ತಿ ಆಕೆಯ ಸುಂದರ ಮುಖಕ್ಕೆ ಆಸಿಡ್ ಎರಚುವುದೋ, ಕತ್ತು ಕೊಯ್ಯುವ ಇಲ್ಲವೇ ಹಲ್ಲೆ ಮಾಡುವ ಹುಂಬತನಕ್ಕಿಳಿಯುತ್ತಾನೆ.
ಪ್ರೀತಿಯಲ್ಲಿ ಅದನ್ನು ಪಡೆಯಬೇಕೆನ್ನುವ ಪೊಸೆಸ್ಸಿವ್‌ನಿಂದಾಗಿ ಅನೇಕ ಸುಂದರ ಯುವತಿಯರಿಂದು ವಿಕಾರವಾಗಿದ್ದಾರೆ. ೧೯೯೯ ರ ಎಪ್ರಿಲ್ ೨೦ರಂದು ಹಸೀನಾ, ೨೦೦೧ರ ಫೆಬ್ರವರಿಯಲ್ಲಿ ನೂರಜಹಾನ್, ೨೦೦೨ರ ಆಗಸ್ಟ್ ೧೨ರಂದು ಶ್ರುತಿ ಸತ್ಯನಾರಾಯಣ, ೨೦೦೭ರ ಜೂನ್ ೨೪ರಂದು ಸರೋಜಿನಿ ಕಲಭಾಗ, ೨೦೦೭ರ ಅಗಸ್ಟ್ ೮ ರಂದು ಹಿನಾ ಫ಼ಾತಿಮಾ, ೨೦೦೮ರ ಅಕ್ಟೋಬರ್ ೨೧ರಂದು ಕಾರ್ತಿಕಾ ಹೀಗೆ ಪಟ್ಟಿ ಬೆಳೆಯುತ್ತಲೆ ಹೋಗುತ್ತದೆ. ಇವರೆಲ್ಲರೂ ಆಸಿಡ್ ಧಾಳಿಗೆ ತುತ್ತಾದವರು. ಇದು ನಿಜವಾದ ಪ್ರೀತಿಯೇ? ಖಂಡಿತಾ ಅಲ್ಲಾ. ನಿಜವಾದ ಪ್ರೀತಿಯು ಹೀಗೆ ಹಿಂಸೆ-ಸೇಡಿಗೆ ಪುಷ್ಟಿ ನೀಡುವುದಿಲ್ಲ ಎನ್ನುವ ಸತ್ಯಾಂಶ ತಿಳಿದಿರಬೇಕು.
ಈಚೆಗೆ ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾನಿಲಯದಲ್ಲಿ ರೈತನ ಮಗನಾದ ಆಕಾಶ ಎನ್ನುವ ಹುಡುಗ ರೋಷನಿ ಗುಪ್ತಾ ಎನ್ನುವ ಹುಡುಗಿಯನ್ನು ಕೊಡಲಿಯಿಂದ ಹಲ್ಲೆ ಮಾಡಿದ್ದ. ಮೇ ತಿಂಗಳಲ್ಲಿ ಮುಂಬೈನ ಬಾಂದ್ರಾದಲ್ಲಿ ಒಬ್ಬ ಯುವಕ ೨೩ ವರ್ಷ ವಯಸ್ಸಿನ ಯುವತಿಯ ಮುಖಕ್ಕೆ ಆಸಿಡ್ ಎರಚಿ ಪರಾರಿಯಾಗಿದ್ದು, ಹುಡುಗಿ ಇನ್ನೂ ಚೇತರಿಸಿಕೊಂಡಿಲ್ಲ. ಮೊಬೈಲ್ ಪರೀಕ್ಷಿಸಿದಾಗ ಅದರಲ್ಲಿ ೨೫೦ಕ್ಕೂ ಅಧಿಕ ರೋಮ್ಯಾಂಟಿಕ್ ಮೆಸೇಜ್‌ಗಳಿದ್ದವಂತೆ.  ಕಳೆದ ತಿಂಗಳು ಚೆನೈನ ಎಮ್‌ಜಿಆರ್ ಸ್ವಾಯತ್ತ ವಿಶ್ವವಿದ್ಯಾಲಯದಲ್ಲಿ ಜಾರ್ಖಂಡ್ ಮತ್ತು ಬಿಹಾರದ ಇಬ್ಬರು ವಿದ್ಯಾರ್ಥಿಗಳು ಪ್ರೀತಿ-ಪ್ರೇಮದ ವಿಷಯವಾಗಿ ಜಗಳಾಡಿ ಒಬ್ಬಾತ ಪಿಸ್ತೂಲಿನಿಂದ ಇನ್ನೊಬ್ಬನ ತಲೆಗೆ ಗುರಿಯಿಟ್ಟಿದ್ದನು. ಮುಂಬೈನ ಠಾಣಾದಲ್ಲಿ ೧೯ ವರ್ಷದ ಓರ್ವ ಯುವತಿಯನ್ನು ೨೨ ವರ್ಷದ ಒಬ್ಬ ಯುವಕ ಪ್ರೀತಿಸುತ್ತಿದ್ದ. ಅದು ಬಹುತೇಕ ಒನ್‌ವೇ ಲವ್ ಆಗಿತ್ತು. ಆ ಹುಡುಗಿ ಅವನನ್ನು ಮದುವೆಯಾಗಲು ಇಷ್ಟವಿಲ್ಲ ಎಂದದ್ದೇ ಆತ ನೇರವಾಗಿ ಅವರ ಮನೆಗೆ ತೆರಳಿ, ಕಲಹಕ್ಕಿಳಿದು ಆ ಹುಡುಗಿಯ ಕತ್ತಲ್ಲಿ ಚಾಕು ಹಾಕಿ ಬಿಟ್ಟ ಹಾಗೆಯೇ ತಾನೂ ಕತ್ತನ್ನು ಸೀಳಿಕೊಂಡ. ಸುದೈವಕ್ಕೆ ಇಬ್ಬರೂ ಬದುಕಿ ಉಳಿದರು. ಇಂತಹ ಅದೆಷ್ಟೋ ಘಟನೆಗಳು ಪ್ರೇಮ ವೈಫ಼ಲ್ಯ ಇಲ್ಲವೆ ನಿರಾಕರಣೆಯ ಹೆಸರಲ್ಲಿ ನಮ್ಮೂರಲ್ಲಿಯೂ ನಡೆಯುತ್ತಿವೆ.
ನಾವು ಎಲ್ಲಿ ಎಡವುತ್ತಿದ್ದೇವೆ. ಮೊಬೈಲ್..ಇದರ ಮೂಲಕವೇ ಎಲ್ಲಾ ಸಂಬಂಧಗಳಿಗೂ ಅವಕಾಶ ಕಲ್ಪಿಸುವುದರಿಂದ ಪ್ರಬುದ್ಧತೆ ಮತ್ತು ಪರಸ್ಪರರನ್ನು ಅರಿಯಲು ಅಲ್ಲಿ ಅವಕಾಶವೇ ಇಲ್ಲದಂತಾಗಿದೆ. ಮೊಬೈಲ್ ಪರಿಚಯದ ಹುಡುಗಾಟವೇ ಪ್ರೇಮವಾಗಿ ಅನೇಕ ಅನಾಹುತಗಳಿಗೆ ಕಾರಣವಾಗಿದೆ. ಹಗಲಿರುಳೆನ್ನದೇ ನಿರಂತರ ರೋಮ್ಯಾಂಟಿಕ್ ಮೆಸೇಜ್‌ಗಳನ್ನು ರವಾನಿಸುವುದೇ ಪ್ರೀತಿ ಎನ್ನುವುದನ್ನು ಯುವಸಮೂಹ ತಿಳಿದುಕೊಂಡಿದ್ದಾರೆ. ಪ್ರೇಮ ಎನ್ನುವುದು ತರಾತುರಿಯಲ್ಲಿ ಕುದುರುವ ವ್ಯವಹಾರವಲ್ಲ. ಹಾಗೆಯೇ ಮೋಹ ಸೆಳೆತಗಳನ್ನೇ ಹಂಬಲಿಸಿ ಪ್ರೀತಿಸುವದು ಸರಿಯೂ ಅಲ್ಲ. ಆದರೆ ಪ್ರೀತಿಯ ಮೌಲ್ಯವನ್ನು ಅರಿಯದೇ ಸಿಕ್ಕಾಪಟ್ಟೆ ಪ್ರೀತಿಸಿ, ನೈಜಪ್ರೀತಿಯನ್ನು ಅರಿಯುವ ತಾಳ್ಮೆ ಕಳೆದುಕೊಂಡ ಯುವಸಮೂಹ ಅನಾಹುತಕ್ಕೆ ನಾಂದಿಯಾಗಿತ್ತಿದ್ದಾರೆ.
ಪ್ರೀತಿಯನ್ನು ಒಂದು ಮೌಲ್ಯ ಎಂದು ಪರಿಗಣಿಸುವ ಮನೋಭಾವ ಬೆಳೆಯಬೇಕು. ಆ ದಿಶೆಯಲ್ಲಿ ನಮ್ಮ ಯುವಕರಿಗೆ ಸುತ್ತಲಿನ ಪರಿಸರ ಮಾರ್ಗದರ್ಶನ ನೀಡಬೇಕು. ಅದಕ್ಕೆ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಿರಬೇಕು. ಹಣವಿದ್ದಾಕ್ಷಣ ದೇಗುಲಗಳಿಗೆ ದಾನ ಧರ್ಮ ಮಾಡುತ್ತಾ, ಊರಿನಲ್ಲಿ ಗಣ್ಯ ವ್ಯಕ್ತಿಗಳೆಂದು ಗುರುತಿಸಿಕೊಳ್ಳುವ ವ್ಯಕ್ತಿಗಳ ಕಾಮಪುರಾಣವು ಹೆಚ್ಚಾದೊಡನೆ ಆ ಊರಿನ ಸಾಮಾನ್ಯ ಯುವಸಮೂಹವು ಕೂಡ ದೃತಿಗೆಡುತ್ತದೆ. ಮದುವೆಯಾಗಿ ಮಕ್ಕಳಿರುವ ಪುರುಷ ಅಥವಾ ಮಹಿಳೆಯೇ ಸಮಾಜದಲ್ಲಿ ಅನೈತಿಕ ವ್ಯವಹಾರದಲ್ಲಿ ಭಾಗಿಯಾಗುತ್ತಾನೆ/ಳೆ ಎಂದರೆ ಅವರಿಂದ ನಾವು ಏನನ್ನು ನಿರೀಕ್ಷೆ ಮಾಡಲು ಸಾಧ್ಯ ಎನ್ನುವ ಪ್ರಶ್ನೆ ಮೂಡುತ್ತದೆ. ಇವುಗಳ ನಡುವೆಯೇ ಪ್ರೀತಿ ಪ್ರೇಮದ ಹೆಸರಿನಲ್ಲಿ ತಲೆಕೆಡಿಸಿಕೊಂಡು ಅದು ಫಲಿಸದೇ ಹೋದಾಗ ತಾಳ್ಮೆ ಕಳೆದುಕೊಂಡು ಹೀನ ಕೃತ್ಯಗಳಿಗೂ ಮುಂದಾಗುತ್ತಾನೆ. ಪ್ರೀತಿಸಿದವರು ಬೇರಾದಾಗ ಕತ್ತು ಕತ್ತರಿಸಿಕೊಳ್ಳುವ ಇಲ್ಲವೇ ಕೊಯ್ಯುವ, ವಿಷ ಸೇವಿಸುವ ಇಲ್ಲವೇ ಆಸಿಡ್ ಎರಚುವ ಕ್ರಿಯೆಗಳಿಗಿಂತಲೂ ಈ ಪ್ರೀತಿ ಎನ್ನುವುದು ಅಗಾಧವಾದುದು. ನಿಜವಾದ ಪ್ರಾಮಾಣಿಕ ಪ್ರೀತಿ ಪರಸ್ಪರರ ಖುಷಿ ಮತ್ತು ಏಳ್ಗೆಯನ್ನು ಬಯಸುತ್ತದೆಯೇ ಹೊರತು ಪರಸ್ಪರರ ದುರಂತ ಕತೆಗಳನ್ನಲ್ಲ ಎನ್ನುವುದನ್ನು ಎಲ್ಲಾ ಯುವ ಪ್ರೇಮಿಗಳು ಅರಿತುಕೊಳ್ಳಬೇಕು. ಪ್ರೀತಿಯೆನ್ನುವುದು ಪ್ರೀತಿಸಿದ ವ್ಯಕ್ತಿಯನ್ನು ಬಲವಂತವಾಗಿ ಪಡೆದು, ಅನುಭವಿಸುವುದಲ್ಲ. ಪ್ರೀತಿಸುವ ಜೀವಗಳು ಒಂದಾಗಬೇಕು, ಪ್ರತಿನಿತ್ಯ ಜೊತೆಗಿರಬೇಕು, ಪ್ರತಿಕ್ಷಣ ಮಾತನಾಡುತ್ತಿರಬೇಕು ಎನ್ನುವುದು ಮಾತ್ರ ಪ್ರೀತಿಯಲ್ಲ. ಅನಿವಾರ್ಯ ಕಾರಣದಿಂದ ಪ್ರೀತಿಸುವವರು ದೂರಾದಾಗ ಅವರನ್ನು ಹಿಂಸಿಸದೇ, ಅವರು ಸಂತೋಷವಾಗಿರಬೇಕು ಎಂದು ಬಯಸುವುದೇ ನಿಜವಾದ ಪ್ರೀತಿ. ಪ್ರೀತಿಯ ನಡುವೆಯೂ ತಮ್ಮ ಪೋಷಕರ ಸುಖ-ಸಂತೋಷವನ್ನು ಮನಗಂಡು ಅದನ್ನು ಈಡೇರಿಸುವವರು ನಿಜವಾದ ಮಕ್ಕಳು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ತಂದೆ ತಾಯಿಯ ನೈಜ ಪ್ರೀತಿಯನ್ನು ಅರಿಯೋಣವಲ್ಲವೇ..ಏನಂತಿರಾ


No comments:

Post a Comment